ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಕುಂದಾಪುರ: ವೃತ್ತಿ – ಪ್ರವೃತ್ತಿಗಳಲ್ಲಿ ಸೋಲು ಸ್ವೀಕರಿಸಬಲ್ಲ ಮನೋಭಾವದ ಬೆಳವಣಿಗೆಯೇ ಬದುಕಿನಲ್ಲಿ ಗೆಲ್ಲಬಲ್ಲ ಸಾಮರ್ಥ್ಯ ಸೃಷ್ಟಿಸುತ್ತದೆ ಎಂದು ಕೊಲ್ಲೂರು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರದಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಶ್ರೀ ವೆಂಕಟರಮಣ ಪ್ರೌಢಶಾಲೆಯ […]
ಕರಾಟೆ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಉಡುಪಿ: ಕಟಪಾಡಿಯಲ್ಲಿ ಇತ್ತೀಚೆಗೆ ನಡೆದ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಕಿಲೇಶ್ ದೇವಾಡಿಗ ಕುಮಿಟಿಯಲ್ಲಿ ಪ್ರಥಮ ಕಟದಲ್ಲಿ ತೃತೀಯ, ಪೃಥ್ವಿರಾಜ್ ಕುಮಿಟಿಯಲ್ಲಿ ಪ್ರಥಮ, ಸಂದೇಶ್ ಕುಮಿಟಿಯಲ್ಲಿ ದ್ವಿತೀಯ ಕಟದಲ್ಲಿ ತೃತೀಯ, ಶ್ರೀಕಾಂತ್ ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. ಇವರು ಕರಾಟೆ ಶಿಕ್ಷಕ ಅಶೋಕ್ ಕುಮಾರ್ ನಡೂರು ಮಾರ್ಗದರ್ಶನದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಗುಂಡೆಸೆತ ಸ್ಪರ್ಧೆ: ಎಕ್ಸಲೆಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಮತ್ತು ಸಿರಿಕಾ ಶೆಟ್ಟಿ ಇವರು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ಅಕ್ಷರ್ ಎನ್ ಶೆಟ್ಟಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳನ್ನು ಎಂ.ಎ ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರೀಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, […]
ಶಾಲಾ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಪ್ರಕರಣ: ಪ್ರತಿಭಟನೆ ನಡೆಸಿದ ಹಿಂಜಾವೇ
ಕುಂದಾಪುರ: ಇಲ್ಲಿನ ಶಂಕರನಾರಾಯಣದಲ್ಲಿ ಮದರ್ ಥೆರೆಸಾ ಸಂಸ್ಥೆಯ ಶಾಲಾ ಕ್ರೀಡೋತ್ಸವ ಸಂದರ್ಭದಲ್ಲಿ ಸ್ವಾಗತ ನೃತ್ಯಕ್ಕೆ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್ ಮಾಡಿಸಿದ ಪ್ರಕರಣ ಸಾಮಾಜಿಕ ಸಾಮಾಜಿಕ ಜಾಲತಾಣಗಳ ಮೂಲಕ ಬೆಳೆಕಿಗೆ ಬಂದ ಬಳಿಕ, ಸಾರ್ವಜನಿಕರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂದೂ ಜಾಗರಣ ವೇದಿಕೆಯು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬುಧವಾರದಂದು ಪ್ರತಿಭಟನೆ ನಡೆಸಿದೆ.
ಶಂಕರನಾರಾಯಣ ಖಾಸಗಿ ಶಾಲೆಯ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಕುಂದಾಪುರ: ಶಂಕರನಾರಾಯಣದ ಖಾಸಗಿ ಶಾಲೆಯೊಂದು ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವನ್ನು ಆಯೋಜಿಸಿತ್ತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಪ್ರದರ್ಶಿಸಿದ್ದರು. ಕ್ರೀಡೋತ್ಸವ ಪ್ರಾರಂಭಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸುಮಾರು 30 ಸೆಕೆಂಡ್ ಗಳ ಕಾಲ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿಗಳ ಬಳಿ ನಮಾಜ್ ಮಾಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಹಿಂದೂ ವಿದ್ಯಾರ್ಥಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಇಸ್ಲಾಂ ಆಚರಣೆಗಳನ್ನು ಹೇರಿಕೆ ಮಾಡಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಶಂಕರನಾರಾಯಣ […]