ನ.6 ರಂದು ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭ

ಮಂದಾರ್ತಿ: ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನ.6 ರಂದು ಬೆಳಿಗ್ಗೆ 10.30 ಕ್ಕೆ ಮಂದಾರ್ತಿ ರಥಬೀದಿಯಲ್ಲಿ ನಡೆಯಲಿರುವುದು. ಮಂದಾರ್ತಿ ಸೇವಾ ಸಹಕಾರಿ ಸಂಘವು ಕಳೆದ 98 ವರ್ಷಗಳಿಂದ ಸಹಕಾರಿ ಕ್ಷೇತ್ರಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದು, ಸರಕಾರದ ಸವಲತ್ತುಗಳನ್ನು ಸದಸ್ಯರಿಗೆ ತಲುಪಿಸಿ ಅಭಿವೃದ್ದಿ ಪಥದಲ್ಲಿ ಮುನ್ನೆಡೆಯುತ್ತಿದೆ. ಸೇವೆಯನ್ನು ಆಧುನೀಕರಣಗೊಳಿಸುವ ಸಲುವಾಗಿ ಮಾಂದಾರ್ತಿಯ ಹೃದಯ ಭಾಗದಲ್ಲಿ ಸಂಪೂರ್ಣ ಹವಾನಿಯಂತ್ರಿತ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು, […]

ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ಆಟೋರಿಕ್ಷಾ ಸಂಚಾರದಲ್ಲಿ ಮಾರ್ಪಾಡು

ಉಡುಪಿ: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು […]

ಕುಂದಾಪುರ: ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ: ನಾಡು ನುಡಿಯ ಬಗ್ಗೆ ಅಭಿಮಾನ ಮತ್ತು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ ‘ಕೋಟಿ ಕಂಠ ಗೀತಗಾಯನ’ ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಜಯಭಾರತ ಜನನಿಯ ತನುಜಾತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಂಡಿಮವ, ಹಚ್ಚೇವು ಕನ್ನಡದ ದೀಪ , ವಿಶ್ವವಿನೂತನ […]

ಭಾಷಣ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ನೆಹರು ಯುವಕೇಂದ್ರ ಉಡುಪಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಯುವ ಉತ್ಸವ-ಯುವ ಸಂವಾದ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಅ. 21 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು , […]

ಪಕ್ಷ ಬಲವರ್ಧನೆಗೆ ಜಿಲ್ಲೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂ ತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.19 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]