ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಅವಿರತವಾಗಿ ನಡೆಯುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಧಾರಿಣಿ ಕೆ. ಎಸ್ […]
ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆ ಹಾಗೂ ಯಾವ ರೀತಿಯ ಜೀವನ ಶೈಲಿ ರೂಢಿಸಿಕೊಳ್ಳುವುದರ ಮೂಲಕ ಇವುಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವುದನ್ನು ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವೈದ್ಯೆ ಡಾ. ವಾಣಿಶ್ರೀ ಐತಾಳ ಮನಮುಟ್ಟುವಂತೆ ವಿವರಿಸಿದರು. ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭೌತ ಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ […]
ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ, ಬೆಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ರಾವ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕುಂದಾಪುರ: ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಇವರು ಪಂದ್ಯವನ್ನುದ್ಘಾಟಿಸಿ ಮಾತನಾಡಿ, ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾಳುಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ […]
ಸೀತಾ ನದಿಗೆ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ ಭಾಗದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸೆಪ್ಟೆಂಬರ್ 14 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. […]