ಕುಂದಾಪುರ: ವಸತಿ ನಿಲಯ, ಆಶ್ರಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 22: ಕುಂದಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳಲ್ಲಿ ಹಾಗೂ ಆಶ್ರಮ ಶಾಲೆಗಳಲ್ಲಿ 2019-20 ನೇ ಸಾಲಿನಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ www.sw.kar.nic.in (ಪ.ಜಾತಿ ವಸತಿ ನಿಲಯಗಳಿಗೆ), www.tw.kar.nic.in (ಪ.ಪಂಗಡ […]

ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ, ಗ್ರಾಮಸ್ಥರಿಂದ ಪ್ರತಿಭಟನೆ

ಕುಂದಾಪುರ: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದ ಗಂಗೊಳ್ಳಿ ಪೊಲೀಸರ ಕ್ರಮ ಖಂಡಿಸಿ ಹೊಸಪೇಟೆ ಗ್ರಾಮಸ್ಥರು ಗಂಗೊಳ್ಳಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡುವುದನ್ನು ಬಿಟ್ಟು ಆರೋಪಿಗಳ ಪರ ಪೊಲೀಸರು ನಿಂತಿರುವುದನ್ನು ಖಂಡಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನೆರೆದಿದ್ದ ನೂರಾರು ಹೊಸಪೇಟೆ ಗ್ರಾಮಸ್ಥರು ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ತ್ರಾಸಿ ಸಮೀಪದ ಹೊಸಪೇಟೆ ನಿವಾಸಿ ಶಿವರಾಜ್ ಖಾರ್ವಿ (26) ಮೂಲತ: ಚಾಲಕನಾಗಿದ್ದು, ಸೋಮವಾರ ರಾತ್ರಿ ಗೋವಾಕ್ಕೆ ಬಾಡಿಗೆಗೆ […]

ಅಭಿವೃದ್ದಿಗೆ ಹಣ ಕೊಡಿ ಎಂದರೆ ಲಿಂಬು ಕೈಯ್ಯಲ್ಲಿಟ್ಟು ತಿರುಗುತ್ತಾರೆ. ರೇವಣ್ಣಗೆ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ

ಕುಂದಾಪುರ: ಕಳೆದ ಒಂಭತ್ತು ತಿಂಗಳುಗಳಿಂದ ಪರಸ್ಪರ ಕಚ್ಚಾಟ ಮಾಡಿಕೊಳ್ಳುತ್ತಲೇ ದೋಸ್ತಿ ಸರ್ಕಾರ ಕಾಲಹರಣ ಮಾಡಿದೆ. ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಹಣ ಬಿಡುಗಡೆ ಮಾಡಿ ಎಂದರೆ ಸಚಿವ ರೇವಣ್ಣನವರು ಬಲಗೈಲಿ ನಾಲ್ಕು, ಎಡಗೈಲಿ ನಾಲ್ಕು ಲಿಂಬೆ ಹಣ್ಣುಗಳನ್ನು ಇಟ್ಟುಕೊಂಡು ತಿರುಗಾಡುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ. ಅವರು ಭಾನುವಾರ ಸಂಜೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಂಪುವಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರರವರ ಪರ ಚುನಾವಣಾ […]

ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ:  ಸಿಎಂ ಕುಮಾರಸ್ವಾಮಿ

ಕುಂದಾಪುರ: ಕರಾವಳಿಯಲ್ಲಷ್ಟೆ ಅಲ್ಲ. ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ. ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳು ಮೈತ್ರಿ ಪಾಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಸಂಜೆ ಇಲ್ಲಿನ ನೆಹರೂ ಮೈದಾನದಲ್ಲಿ ಜಾತ್ಯಾತೀತ ಜನತಾ ದಳ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಮಹಿಳಾ ಮೀನುಗಾರರ ಸಮಾವೇಶಕ್ಕೆ ಆಗಮಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಅಭ್ಯರ್ಥಿಗಳಿಗೆ ತಮ್ಮ ಸಾಧನೆಗಳನ್ನು ಹೇಳಿ ಮತ ಕೇಳಲು ಆಗುತ್ತಿಲ್ಲ. […]

ಮೋದಿ ಎಂದು ಕೂಗೋಣ: ವೈರಲ್ ಸಂದೇಶಕ್ಕೆ ಸಿಡಿದೆದ್ದ ಖಾಕಿ!

ಕುಂದಾಪುರ: ಸಿಎಂ ಕುಮಾರಸ್ವಾಮಿ ಮೀನುಗಾರರ ಸಮಾವೇಶಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗೋಣ ಎಂದು ಬಿಜೆಪಿ ಕಾರ್ಯಕರ್ತರು ಎನ್ನಲಾಗಿರುವ ಯುವಕರು ವಾಟ್ಸ್ಯಾಪ್‍ನಲ್ಲಿ ಸಂದೇಶ ಹರಿಯಬಿಟ್ಟಿದ್ದಾರೆ. ವೈರಲ್ ಸಂದೇಶವನ್ನರಿತ ಕುಂದಾಪುರ ಡಿವೈಎಸ್‍ಪಿ ನೇತೃತ್ವದ ಪೊಲೀಸರ ತಂಡ ಸಂದೇಶ ಫಾರ್ವಡ್ ಮಾಡಿ ಅಹಿತಕರ ಘಟನೆಗಳಿಗೆ ಹೊಂಚು ಹಾಕುತ್ತಿರುವ ಒಂದಷ್ಟು ಮಂದಿ ಯುವಕರನ್ನು ಠಾಣೆಗೆ ಕರೆತಂದಿದ್ದಾರೆ. ಬಿಗು ಬಂದೋಬಸ್ತ್: ಸಿಎಂ ಕಾರ್ಯಕ್ರಮದಲ್ಲಿ ಯಾವುದೇ ಅಹಿಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ನಾಲ್ಕು […]