ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಿಗಾಗಿ ಕಾರ್ಯಾಗಾರ

ಕುಂದಾಪುರ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 28 ರಂದು ಭೌತಶಾಸ್ತ್ರದ ಉಪನ್ಯಾಸಕರಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಉಪನ್ಯಾಸಕರು ಅತ್ಯುತ್ತಮ ಬೋಧನಾ ಶೈಲಿಯನ್ನು ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು. ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮತ್ತು ಉಡುಪಿ […]

ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಕುಂದಾಪುರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂನ್ 10 ರಂದು ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಶೈಕ್ಷಣಿಕ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರೂ ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು. ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ರಸಾಯನ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 2022 – 23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್ ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ನೇಹಾ ಜೆ.ರಾವ್ 3ನೇ, ಸೃಜನ್ ಭಟ್ 6ನೇ, ಪ್ರಣಮ್ಯ 7 ನೇ, ಪ್ರಜ್ಞಾ ಶೆಟ್ಟಿ , ನಿತೇಶ್, ಇಂಚರ 8ನೇ, ಮಯೂರ್ ಶೆಟ್ಟಿ 9ನೇ , ಉಜ್ವಲ ಶೇಟ್, ಸಂಜನಾ ಶೆಟ್ಟಿ 10ನೇ ರ‍್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ನೇಹಾ ಎಸ್. ರಾವ್ 5ನೇ, […]

ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ: ಡಾ.ಪಿ.ವಿ.ಭಂಡಾರಿ

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು  ಹರೆಯವೂ ಅಲ್ಲದ ವಯಸ್ಕರೂ ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು. ಜೀವನದಲ್ಲಿ ಎಲ್ಲ ಬಾಗಿಲುಗಳು ಮುಚ್ಚಿದರೂ ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು  ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು. ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ […]

ವಂಡ್ಸೆ ಗ್ರಾಮಕ್ಕೆ ಬೇಕಾಗಿದೆ 108 ಅಂಬ್ಯುಲೆನ್ಸ್ ಮತ್ತು ಸಮುದಾಯ ಆರೋಗ್ಯ ಕೇಂದ್ರ

ಕುಂದಾಪುರ: ವಂಡ್ಸೆ ಹೋಬಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದರೂ 108 ಅಂಬ್ಯುಲೆನ್ಸ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಇಲ್ಲದಿರುವುದು ದುರದೃಷ್ಕಕರ. ವಂಡ್ಸೆ ಹೋಬಳಿ ಗ್ರಾಮ ಆಗಿರುವುದರಿಂದ ಇಲ್ಲಿಗೆ ಒಂದು ಸಮುದಾಯ ಆರೋಗ್ಯ ಕೇಂದ್ರ ಮತ್ತು 108 ಅಂಬ್ಯುಲೆನ್ಸ್ ಸೌಲಭ್ಯ ಅಗತ್ಯವಾಗಿದೆ. ಇಲ್ಲಿನ ಸರಕಾರಿ ಕಛೇರಿ, ಬ್ಯಾಂಕುಗಳು, ಸೊಸೈಟಿಯಂತಹ ನಾನಾ ಕೆಲಸಗಳಿಗೆ ಬೇರೆ ಗ್ರಾಮಗಳಿಂದ ನೂರಕ್ಕೂ ಹೆಚ್ಚು ಜನರು ವ್ಯವಹಾರಕ್ಕಾಗಿ ಪ್ರತಿ ನಿತ್ಯ ಬರುತ್ತಾರೆ. ಹೋಬಳಿಗೊಂದು ಸಮುದಾಯ ಆರೋಗ್ಯ ಕೇಂದ್ರ ಇದ್ದರೆ ಸಾರ್ವಜನಿಕರಿಗೆ ಅನುಕೂಲವಾಗುವುದು.ಇಲ್ಲಿ ಯಾರದ್ದಾದರೂ ಆರೋಗ್ಯ ಹದೆಗೆಟ್ಟರೆ […]