ಕುಂದಾಪುರ: ಕುಲಾಲ ಸಮಾಜ ಸಂಘದ ಕಟ್ಟಡ ನವೀಕರಣಕ್ಕೆ ಧನಸಹಾಯ

ಕುಂದಾಪುರ: ಕುಲಾಲ ಕ್ರೀಡೋತ್ಸವ- 2022ರಲ್ಲಿ ಉಳಿತಾಯವಾದ ಮೊತ್ತ 80400 ರೂ ಗಳನ್ನು ಕುಂದಾಪುರದ ಕುಲಾಲ ಸಮಾಜ ಸುಧಾರಕರ ಸಂಘದ ಕಟ್ಟಡ ನವೀಕರಣಕ್ಕೆ ಧನ ಸಹಾಯ ರೂಪದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಘವೇಂದ್ರ ಕುಲಾಲ ಹೆಮ್ಮಾಡಿ, ವಿಠ್ಠಲ ಕುಲಾಲ ಹೆಸ್ಕುತ್ತುರು, ಹರೀಶ ಕುಲಾಲ ಕೆದೂರು, ಮಂಜುನಾಥ ಕುಲಾಲ ನೆಲ್ಲಿಕಟ್ಟೆ, ಹರೀಶ ಕುಲಾಲ ಹೊಂಬಾಡಿ, ಶಂಕರ ಕುಲಾಲ ಮೊಳಹಳ್ಳಿ ಉಪಸ್ಥಿತರಿದ್ದರು.

ನಾಳೆ(ಜ. 27) ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ‘ಸಹಕಾರ ಸಿರಿ’ ಉದ್ಘಾಟನೆ

ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಸಹಕಾರ ಸಿರಿ ಇದರ ಉದ್ಘಾಟನಾ ಸಮಾರಂಭವು ಜ. 27 ಶುಕ್ರವಾರದಂದು ಬೆಳಿಗ್ಗೆ ಗಂಟೆ 10:30ಗೆ ಸಂಘದ ವಠಾರ ಬೀಸಿನಪಾರೆಯಲ್ಲಿ ನಡೆಯಲಿದೆ. ನೂತನ ಕಟ್ಟಡ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಮಾಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಪ್ರಧಾನ […]

ಕುಂದಾಪುರ ಬಸ್ ಗಳು ಹೆಬ್ರಿ ಪ್ರಥಮ ದರ್ಜೆ ಕಾಲೇಜು ರಸ್ತೆಯಾಗಿ ಬರುವಂತೆ ಸೂಚನೆ

ಉಡುಪಿ: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ನಿರ್ಣಯದಂತೆ ಕುಂದಾಪುರ ಹಾಗೂ ಬ್ರಹ್ಮಾವರದಿಂದ ಆಗಮಿಸುವ ಎಲ್ಲಾ ಬಸ್ಸುಗಳು ಹೆಬ್ರಿ ತಾಲೂಕಿನ ಹೆಬ್ರಿ ಪ್ರಥಮ ದರ್ಜೆ ಕಾಲೇಜು ರಸ್ತೆಗೆ ಬಂದು ಉಡುಪಿ ರಸ್ತೆಗೆ ಸಂಧಿಸಿ, ಹೆಬ್ರಿ ಪೇಟೆಗೆ ತೆರಳುವಂತೆ ಸಂಬಂಧಪಟ್ಟ ಬಸ್ಸು ಮಾಲೀಕರು ಕ್ರಮವಹಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಣ್ಣಾರಿ: ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರ

ಕುಂದಾಪುರ: ಜೆ.ಸಿ.ಐ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರವು ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿ ಇವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು ಮತ್ತು ಓದಿದ ವಿಚಾರ ಹೆಚ್ಚು ಮನನ ಮಾಡಿಕೊಳ್ಳುವುದರಿಂದ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೆಂದು […]

ಕುಂದಾಪುರ: ಕಳ್ಳತನ ಆರೋಪಿಗಳ ಬಂಧನ; 16 ಲಕ್ಷ ಮೌಲ್ಯದ ಸ್ವತ್ತು ಸ್ವಾಧೀನ

ಕುಂದಾಪುರ: ಕುಂದಾಪುರ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಕುಂದಾಪುರ ಪಿಎಸ್ಐ ಮತ್ತು ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 15 ಲಕ್ಷ ಮೌಲ್ಯದ ಚಿನ್ನಾಭರಣಗಳು, 1 ಲಕ್ಷ ಮೌಲ್ಯದ ಬೆಳ್ಳಿ ಒಟ್ಟು 16 ಲಕ್ಷ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಪ್ರಕರಣ ಕಾಸರಗೋಡಿನ ಹಾಶಿಮ್ ಎ.ಎಚ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬ ಕಳ್ಳರಿಬ್ಬರು ಕೋಟೇಶ್ವರದ ಪ್ರಸನ್ನ ನಾರಾಯಣ ಆಚಾರ್ಯರವರ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದರು. ಈ ಇಬ್ಬರನ್ನೂ […]