ವಾರಾಹಿ ಯೋಜನೆಗಾಗಿ ಮರಗಳ ತೆರವು: ಜ. 16 ರಂದು ಸಾರ್ವಜನಿಕ ಅಹವಾಲು ಸಭೆ
ಕುಂದಾಪುರ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ, ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸ.ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 343 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಜನವರಿ 16 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ […]
ಹಾಲಾಡಿಯಲ್ಲಿ ಆಳುಪರ ಕಾಲದ ಅಪರೂಪದ ಶಾಸನ ಪತ್ತೆ: ಪ್ರೊ.ಟಿ. ಮುರುಗೇಶಿ ಅವರಿಂದ ಸಂಶೋಧನೆ
ಉಡುಪಿ: ಕುಂದಾಪುರ ತಾಲೂಕು 76 ಹಾಲಾಡಿಯ ಹುಯ್ಯಾರುವಿನಲ್ಲಿ ಅತಿ ವಿರಳ ಎನ್ನಬಹುದಾದ ಶಾಸನ ಪತ್ತೆಯಾಗಿದೆ. ಹುಯ್ಯಾರು ಪಟೇಲ್ ದಿ.ಹಿರಿಯಣ್ಣ ಶೆಟ್ಟಿ ಕುಟುಂಬಿಕರ ಜಾಗದಲ್ಲಿ ಈ ಶಾಸನವಿದೆ. ಸುಮಾರು 10 ಅಡಿ ಎತ್ತರ, 5 ಅಡಿ ಅಗಲ ಮತ್ತು 3.5 ಇಂಚು ದಪ್ಪ ಗ್ರಾನೈಟ್ ಶಿಲೆಯಲ್ಲಿ ಶಾಸನವನ್ನು ರಚಿಸಲಾಗಿದೆ. ಆಯತಾಕಾರದ ರಚನೆಯನ್ನು ಹೊಂದಿರುವ ಇದರ ಮೇಲ್ಭಾಗವನ್ನು ಕೋನಾಕೃತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಶಾಸನವನ್ನು ಎರಡು ಪಟ್ಟಿಕೆಗಳನ್ನಾಗಿ ವಿಂಗಡಿಸಲಾಗಿದ್ದು, ಮೇಲಿನ ಕೋನಾಕೃತಿಯ ಪಟ್ಟಿಕೆಯ ಮೇಲೆ ಎಂಟು ಸಾಲುಗಳಲ್ಲಿ ಶಾಸನವನ್ನು ಬರೆಯಲಾಗಿದೆ. ಬರವಣಿಗೆ […]
ಚಾಂತಾರು: ಜನವರಿ22 ರಂದು ಚಾನ್ ಸ್ಟಾರ್ ಯೂತ್ ಕ್ಲಬ್ ಇದರ ರಜತ ಮಹೋತ್ಸವ ಸಮಾರಂಭ
ಕುಂದಾಪುರ: ಇಲ್ಲಿನ ಚಾಂತಾರಿನ ಚಾನ್ ಸ್ಟಾರ್ ಯೂತ್ ಕ್ಲಬ್ ಇದರ ರಜತ ಮಹೋತ್ಸವ ಕಾರ್ಯಕ್ರಮವು ಜನವರಿ 22 ಭಾನುವಾರದಂದು ಚ್ಯವನ ಋಷಿಗಳ ನಾಡಾದ ಚಾಂತಾರಿನ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. 25 ವರ್ಷಗಳ ಸಾರ್ಥಕ ಸ್ನೇಹ ಪಯಣದ ನೆನಪಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ 25 ಜನ ಸಾಧಕರನ್ನು ಸನ್ಮಾನಿಸಲಾಗುವುದು ಹಾಗೂ ಶರಣ್ಯ ಚಾಂತಾರು ಇವರ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಲಾಗುವುದು. ಕಾರ್ಯಕ್ರಮದಲ್ಲಿ ಹಿರಿಯ ಧಾರ್ಮಿಕ ಮುಖಂಡ […]
ಕುಂದಾಪುರ: ಜಿಲ್ಲಾ ಇತಿಹಾಸದಲ್ಲೇ ಮೊದಲ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಹಬ್ಬ- ಜಾನ್ಸನ್ ಟ್ರೋಫಿ ಇಂದಿನಿಂದ ಪ್ರಾರಂಭ
ಕುಂದಾಪುರ: ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇವರ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾಟ ಜಾನ್ಸನ್ ಟ್ರೋಫಿ ಇಲ್ಲಿನ ಗಾಂಧೀ ಮೈದಾನದಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಜಾನ್ಸನ್ ಕ್ರಿಕೆಟರ್ಸ್ ಹಂಗಳೂರು ಇದರ ಅಧ್ಯಕ್ಷ ರವೀಂದ್ರ ಹೆಗ್ಡೆ ಹೇಳಿದರು. ಬುಧವಾರ ಕುಂದಾಪುರ ಪ್ರೆಸ್ಕ್ಲಬ್ನಲ್ಲಿ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ, ಪಂದ್ಯಾಟದ ಎರಡನೇ ದಿನವಾದ ಡಿ. 30ರ ಶುಕ್ರವಾರ ಸಂಜೆ 7 ಗಂಟೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ […]
ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ
ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]