ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ

ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]
ಕುಂದಾಪುರ: ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮಾವೇಶ

ಕುಂದಾಪುರ: ದೇಶದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ-2ರ ಗ್ರಾಹಕರ ಸಮವೇಶವು ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಬಂಧಕ ಶ್ರೀಜಿತ್ ಮಾತನಾಡಿ ತುಂಬ ಸಮಯದ ಬಳಿಕ ಗ್ರಾಹರಕ ಜೊತೆ ಸಂವಾದ ಮಾಡುವ ಯೋಗ ಬಂದಿದೆ. ಜಾಗತಿಕ ಸಾಂಕ್ರಮಿಕ ಸಂದರ್ಭದಲ್ಲಿ ತೊಂದರೆಯಾದರೂ ಬ್ಯಾಂಕ್ ತನ್ನ ಗ್ರಾಹಕರನ್ನು ಆಧರಿಸಿದೆ. ಡಿಸೆಂಬರ್ ಅಂತ್ಯಕ್ಕೆ ಬ್ಯಾಂಕ್ 20 […]
ಕುಂದಾಪುರ: ಡಿ. 22 ರಂದು ವಿದ್ಯುತ್ ವ್ಯತ್ಯಯ

ಕುಂದಾಪುರ: 110/11 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 22 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಜನ್ಸಾಲೆ ಮಾರ್ಗಗಳಲ್ಲಿ, ಉಳ್ಳೂರು-74, ಯಡಮೊಗೆ, ಕಮಲಶಿಲೆ, ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
2 ಪ್ರತ್ಯೇಕ ದಾಳಿಯಲ್ಲಿ ನಾಲ್ಕು ಟಿಪ್ಪರ್; 20 ಮೆಟ್ರಿಕ್ ಟನ್ ಅಕ್ರಮ ಮರಳು ವಶ: ಗಣಿ ಇಲಾಖಾಧಿಕಾರಿಗಳಿಂದ ಕ್ಷಿಪ್ರ ಕಾರ್ಯಾಚರಣೆ

ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ (ಡಿ.19) ಮದ್ಯಾಹ್ನ 12.30ಕ್ಕೆ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಚಾರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ […]
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿಗೆ ಪ್ರಥಮ ಸ್ಥಾನ

ಕುಂದಾಪುರ: ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೇರಿ ವತಿಯಿಂದ ಡಿ. 15 ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.