ವಾರದೊಳಗೆ ಅಪಘಾತ ಪ್ರಕರಣಗಳ ಶಾಶ್ವತ ಪರಿಹಾರ ಕಾರ್ಯಗಳ ವರದಿ ಒಪ್ಪಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ರಾಷ್ಟೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ತಾತ್ಕಾಲಿಕ ಸುರಕ್ಷತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವಂತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಹೆಚ್ಚಿನ ಒತ್ತು ನೀಡಿ ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅಧಿಕಾರಿಗಳಿಗೆ […]

ಮಳೆಹಾನಿ ಅಧ್ಯಯನ: ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಭೇಟಿ

ಉಡುಪಿ: ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಟದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಹೇಳಿದರು. ಅವರು ಗುರುವಾರ ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು […]

ಗಣೇಶ ಚತುರ್ಥಿ ಆಚರಣೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಾಭಾವಿ ಸಭೆ

ಉಡುಪಿ: ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾ ರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ […]

ಹಿರ್ಗಾನ: ಆಗಸ್ಟ್ 20 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 20 ರಂದು ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಹಿರ್ಗಾನ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜದ ಗೌರವ ಕಾಪಾಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹರ್ ಘರ್ ತಿರಂಗಾ ಕಾರ್ಯಕ್ರಮವು ಕೇಂದ್ರ ಸರ್ಕಾರದ ರಾಷ್ಟ್ರಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಆಗಸ್ಟ್ 13 ರಿಂದ 15 ರವರೆಗೆ ಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ಮನೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯಲು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೋರಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಆಗಸ್ಟ್ 13 ರ ಬೆಳಗ್ಗೆ ಧ್ವಜಾರೋಹಣ ನಡೆಸಿ, ಆ.15 ರ ಸಂಜೆ ಧ್ವಜ ಅವರೋಹಣ ಮಾಡಿ, ನಂತರ ಧ್ವಜವನ್ನು ಸುರಕ್ಷಿತವಾಗಿ ತಮ್ಮ ಮನೆಗಳಲ್ಲಿಯೇ […]