ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]
ಒಂದು ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಇನ್ನೊಂದು ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೇ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಹೆಣ್ಣಿಗೆ ನ್ಯಾಯ ಕೊಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.29 ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಹಿರಿಯ ಮುಖಂಡರ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ […]
ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಕಾಂಗ್ರೆಸ್ ಪಕ್ಷದ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹಿರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ […]
ನಾಳೆ (ಜು.14) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ […]
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]