ಕಾಪು: ರಕ್ಷಿತ್ ಕೋಟ್ಯಾನ್ ಹಲ್ಲೆ ಪ್ರಕರಣ; ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕೃತ್ಯ ಎಸಗಿರುವುದು ಕಂಡು ಬಂದಿದೆ. ತಾವು […]

ವಚನಭ್ರಷ್ಟ ಕಾಂಗ್ರೆಸ್ ಸರಕಾರದ ಸುಳ್ಳು ಗ್ಯಾರಂಟಿ ವಿರುದ್ದ ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ […]

ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ಧಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ […]

ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸಲು ಮೋಸದ ತಂತ್ರ ಅನುಸರಿಸಿದಲ್ಲಿ ಹೋರಾಟ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ ತೆರಿಗೆ ಹಣದಿಂದ ಬೇಕಾಬಿಟ್ಟಿ ಉಚಿತಗಳ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬಂದು, ಮಾತೆತ್ತಿದರೆ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರಿಹಾಯ್ದಿದ್ದಾರೆ. ಬಿಜೆಪಿ ಚುನಾವಣಾ […]

ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬ: ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಕಾರ್ಡ್ ಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದು 1 ವಾರ ಕಳೆದರೂ ಜಾರಿ ಮಾಡದೇ ಇರುವುದನ್ನು ಜಿಲ್ಲಾ ಬಿಜೆಪಿ ಖಂಡಿಸಿದೆ. ಶನಿವಾರದಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಡೆಯನ್ನು ಖಂಡಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ […]