ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ
![](https://udupixpress.com/wp-content/uploads/2022/11/IMG-20221114-WA0012-1024x768.jpg)
ಮಣಿಪಾಲ: ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]
ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
![](https://udupixpress.com/wp-content/uploads/2022/07/bjp.png)
ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ […]
ಬಿಜೆಪಿ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆ
![](https://udupixpress.com/wp-content/uploads/2022/11/janasakalpa1.png)
ಉಡುಪಿ: ನ.5 ರಂದು ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]
ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ಮುಗಿಲು ಮುಟ್ಟಿದ ಕೋಟಿ ಕಂಠ ಗಾಯನ
![](https://udupixpress.com/wp-content/uploads/2022/10/BJP1.png)
ಮಣಿಪಾಲ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರದಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂಬಾಗದಲ್ಲಿರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ನಡೆಯಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕನ್ನಡ ಶಾಲು ಮತ್ತು ಟೋಪಿಗಳನ್ನು ಧರಿಸಿ ರಾಜ್ಯ […]
ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು; ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಬಿಜೆಪಿ-ಎಸ್.ಡಿ.ಪಿ.ಐ ಒಳ ಒಪ್ಪಂದ ಆರೋಪಕ್ಕೆ ಕುಯಿಲಾಡಿ ತಿರುಗೇಟು
![](https://udupixpress.com/wp-content/uploads/2022/04/kuyiladi-suresh-nayak.jpg)
ಉಡುಪಿ: ಸಿಎಎ ವಿರುದ್ಧ ಎಸ್.ಡಿ.ಪಿ.ಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಭೀತಿ ಶುರುವಾಗಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್.ಡಿ. ಪಿ.ಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ನ […]