ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾ ಬಿಜೆಪಿ ಒತ್ತಾಯ

ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಾಹನ ತಡೆದು, ತಲವಾರು ಝಳಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಮತ್ತು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕರಾವಳಿ ಜಿಲ್ಲೆಯು ಅನೇಕ ದಿನಗಳಿಂದ ಶಾಂತಿಯ ವಾತಾವರಣದಲ್ಲಿದ್ದು, ಕೆಲವು ಶಕ್ತಿಗಳು ಅಶಾಂತಿ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ, ಪಕ್ಷದ ಶಾಸಕರಾದ ಹರೀಶ್ ಪೂಂಜಾ ರವರು ನಿನ್ನೆ ರಾತ್ರಿ ಊರಿಗೆ ವಾಪಾಸು ಬರುತ್ತಿದ್ದ ಸಂದರ್ಭ ಕಾರಿಗೆ ಅಡ್ಡಹಾಕಿ […]

ಜಿಲ್ಲಾ ಬಿಜೆಪಿ ವತಿಯಿಂದ ಅ.22ರಂದು ಪ.ಜಾತಿ, ಪ.ಪಂಗಡದ ಬೃಹತ್ ಸಮಾವೇಶ

ಉಡುಪಿ: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15% ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3% ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ.‌ ಸಮುದಾಯದ ಮುಖಂಡರು ಅ.17 ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ […]

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ‌ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ‌ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ […]

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ನೇಮಕ

ಉಡುಪಿ: ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಅಬ್ದುಲ್ ಮುತಾಲಿ ಇವರು ಈಗಾಗಲೇ ಉಡುಪಿ ಜಿಲ್ಲಾ ವಕ್ಛ್ ಬೋರ್ಡಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆ ಮೇರೆಗೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಲಾಗಿದ್ದು, ರಿಕ್ತ ಸ್ಥಾನಕ್ಕೆ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ಅವರನ್ನು ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲ; ದೇಶ ವಿಭಜನೆಯ ಪ್ರಾಯಶ್ಚಿತ್ತ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗ […]