ಉಡುಪಿ:ರಾಜ್ಯ ಮಟ್ಟದ ವಕೀಲರ ಯಕ್ಷಗಾನ ಸ್ಪರ್ಧೆ ಉದ್ಘಾಟನೆ
ಉಡುಪಿ: ಉಡುಪಿಯ ಪುರಭವನದಲ್ಲಿ ಆಯೋಜಿಸಲಾದ ಎರಡು ದಿನಗಳ ರಾಜ್ಯ ಮಟ್ಟದ ವಕೀಲರ ಯಕ್ಷಗಾನ ಸ್ಪರ್ಧೆ ‘ಯಕ್ಷ ಕಲಾ ವೈಭವವನ್ನು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಬಿ.ಎ. ಪಾಟೀಲ್ ಸೋಮವಾರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಬಿ.ಎ. ಪಾಟೀಲ್ ಮಾತನಾಡಿ, ವಕೀಲ ವೃತ್ತಿ ಹೆಚ್ಚು ಒತ್ತಡದಿಂದ ಇರುವ ವೃತ್ತಿಯಾಗಿದೆ. ಈ ಮಧ್ಯೆ ವಕೀಲರು ನಮ್ಮ ಸಂಸ್ಕೃತಿಗಾಗಿ ಸಮಯವನ್ನುವಿನಿಯೋಗಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶಬಿ.ಎ. ಪಾಟೀಲ್ ಹೇಳಿದರು. ಸಾಹಿತಿ ಶಿವರಾಮ ಕಾರಂತರು ಮಾಡಿದ ಹೊಸ ಹೊಸ ಪ್ರಯೋಗಗಳಿಂದ ಇಂದು […]