ಮಹಾರಾಷ್ಟ್ರ ಪ್ರವಾಸ ಕೈಗೊಂಡ ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್: ರಸ್ತೆ ಮಾರ್ಗವಾಗಿ ತೆರಳಿದ ಅವರ ಬೆಂಗಾವಲು ಪಡೆ 6 ಕಿ.ಮೀ.ಗೂ ಅಧಿಕವಾಗಿತ್ತು. ಸಚಿವರು, ಸಂಸದರು, ಶಾಸಕರು, ಎಂಎಲ್​ಸಿಗಳು ಸೇರಿದಂತೆ ಪಕ್ಷದ ಮುಖಂಡರ ಜತೆಗೂಡಿ ಅವರು ಸೊಲ್ಲಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್ ಅವರು ತಮ್ಮ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯನ್ನು ವಿಸ್ತರಿಸುವ ಭಾಗವಾಗಿ ಇಂದು 600 ವಾಹನಗಳ ಬೃಹತ್​ ಬೆಂಗಾವಲು ಪಡೆಯೊಂದಿಗೆ ಮಹಾರಾಷ್ಟ್ರಕ್ಕೆ ತೆರಳಿದರು. ರಾಷ್ಟ್ರೀಯ ಪಕ್ಷ ಘೋಷಿಸಿರುವ ತೆಲಂಗಾಣ ಸಿಎಂ ಕೆಸಿಆರ್​ ಅವರು ಪಕ್ಷದ ಬಲವರ್ಧನೆಗಾಗಿ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ. 600 ವಾಹನಗಳ […]