ಮಾಹೆ ವತಿಯಿಂದ ಡಿಸೆಂಬರ್ 19 ರಿಂದ 21 ರವರೆಗೆ ಪ್ರಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಆಯೋಜನೆ
![](https://udupixpress.com/wp-content/uploads/2022/12/KMC-Manipal.png)
ಮಣಿಪಾಲ: ಡಿಸೆಂಬರ್ 19 ರಿಂದ 21 ರವರೆಗೆ ಮಾಹೆಯ ಕಸ್ತೂರ್ಬಾ ವೈದ್ಯಕೀಯ ಕಾಲೇಜು ತನ್ನ ಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಅನ್ನು ಆಯೋಜಿಸುತ್ತಿದೆ. ವಿವಿಧ ಭಾರತೀಯ ಸಂಸ್ಥೆಗಳ ನರವಿಜ್ಞಾನಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನೊಣಗಳು, ಸೊಳ್ಳೆಗಳು, ಇಲಿಗಳು, ಮಂಗಗಳು ಮತ್ತು ರೋಗಿಗಳ ಜನಸಂಖ್ಯೆಯಂತಹ ವಿವಿಧ ಮಾದರಿ ಜೀವಿಗಳ ಮೇಲೆ ಕೆಲಸ ಮಾಡುತ್ತಿರುವ ಭಾರತೀಯ ನರವಿಜ್ಞಾನದ ಸಂಶೋಧಕರು ಮತ್ತು ಚಿಕಿತ್ಸಕರನ್ನು ಒಟ್ಟುಗೂಡಿಸುವ ಮೂಲಕ ನ್ಯೂರೋಬಯಾಲಾಜಿಕಲ್ ಸಮ್ಮೇಳನವು ನ್ಯೂರೋಸೈಕಿಯಾಟ್ರಿಕ್ ಅಸ್ವಸ್ಥತೆಗಳು ಮತ್ತು ಮೂಲಭೂತ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಮೆದುಳಿನ […]
ಮಾಹೆಯ ನೂತನ ರಿಜಿಸ್ಟ್ರಾರ್ ಆಗಿ ಡಾ. ಪಿ. ಗಿರಿಧರ್ ಕಿಣಿ ಅಧಿಕಾರ ಸ್ವೀಕಾರ
![](https://udupixpress.com/wp-content/uploads/2022/12/MAHE.png)
ಮಣಿಪಾಲ: ಮಾಹೆಯ ಅಡ್ಮಿಶನ್ ವಿಭಾಗದ ನಿರ್ದೇಶಕ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಡಾ. ಪಿ. ಗಿರಿಧರ್ ಕಿಣಿ ಇವರು ಮಾಹೆ ಮಣಿಪಾಲದ ನೂತನ ರಿಜಿಸ್ಟ್ರಾರ್(ಕುಲಸಚಿವ) ಆಗಿ ನೇಮಕಗೊಂಡಿದ್ದು ಡಿ. 01 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿ.ಇ. ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ (1995 ) ಮತ್ತು ಎಂ.ಟೆಕ್(1998) ಮತ್ತು ಪಿಎಚ್ ಡಿ ಪದವೀಧರರಾದ ಇವರು 1999 ರಲ್ಲಿ ತಾವು ಓದಿದ ಕಾಲೇಜಿನಲ್ಲಿಯೆ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ಅಂದಿನಿಂದ ಮಾಹೆಯಲ್ಲಿ […]
ಮಾಹೆ ಜಿಸಿಪಿಎಎಸ್ ನಲ್ಲಿ ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕ ಬಿಡುಗಡೆ
![](https://udupixpress.com/wp-content/uploads/2022/11/mahe.png)
ಮಣಿಪಾಲ: ಜಗತ್ತಿನ ಉಪಭೋಗವಾದದ ಮನೋಭಾವ ಪರಿಸರದ ಜೀವಾಳವನ್ನೇ ಭಕ್ಷಿಸುತ್ತಿರುವ ಮತ್ತು ಹಿಂಸಾಚಾರವು ವಿಪರೀತವಾಗುತ್ತಿರುವ ಈ ಕಾಲಕ್ಕೆ ಮಹಾತ್ಮ ಗಾಂಧಿಯವರು ಹೆಚ್ಚು ಪ್ರಸ್ತುತವಾಗುತ್ತಾರೆ ಎಂದು ಪರಿಸರವಾದಿ ಮಮತಾ ರೈ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಬಹುರೂಪಿ ಮತ್ತು ವಿವಿಡ್ ಲಿಪಿ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಲಾವಿದ ಗುಜ್ಜಾರ್ ಅವರ ಮಕ್ಕಳಿಗಾಗಿ ಗಾಂಧಿ ಮತ್ತು ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಇಂದು ಬಿಡುಗಡೆಯಾಗಿರುವ ಸಚಿತ್ರ ಪುಸ್ತಕಗಳು […]
ರಾಷ್ಟ್ರಮಟ್ಟದ ಬಯೋಕ್ವಿಜ್ ರಸಪ್ರಶ್ನೆಯಲ್ಲಿ ಮಾಹೆ ವಿದ್ಯಾರ್ಥಿನಿ ಮೈಥಿಲಿ ಪದವು ಪ್ರಥಮ
![](https://udupixpress.com/wp-content/uploads/2022/11/india-bio.png)
ಮಣಿಪಾಲ: ಮಾಹೆಯ ಮಣಿಪಾಲ್ ಸ್ಕೂಲ್ ಆಫ್ ಸೈನ್ಸಸ್ ನ ಬಿ.ಎಸ್ಸಿ ಬಯೋಟೆಕ್ನಾಲಜಿಯ 5ನೇ ಸೆಮೆಸ್ಟರ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಮೈಥಿಲಿ ಪದವು ರಾಷ್ಟ್ರ ಮಟ್ಟದ ರಸಪ್ರಶ್ನೆ ಸ್ಪರ್ಧೆ ‘ಬಯೋಕ್ವಿಜ್-2022’ ರ ಅಂತಿಮ ಸುತ್ತಿನಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ & ಟಿ ಇಲಾಖೆಯಿಂದ ಆಯೋಜಿಸಲಾಗಿದದ್ದ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವು ಏಷ್ಯಾದ ಅತ್ಯಂತ ಪ್ರತಿಷ್ಠಿತ ಬೆಂಗಳೂರು ಟೆಕ್ ಶೃಂಗಸಭೆಯ ಭಾಗವಾಗಿತ್ತು. ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ […]
ಮೋದಿ ಕನಸಿನ ಸದೃಢ ಸ್ವಾವಲಂಬಿ ‘ಹೊಸ ಭಾರತ’ಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ: ರಾಜನಾಥ್ ಸಿಂಗ್
![](https://udupixpress.com/wp-content/uploads/2022/11/rajanath-singh.png)
ಮಣಿಪಾಲ: ಯುವಕರು ಹೊಸ ಆವಿಷ್ಕಾರ, ತಂತ್ರಜ್ಞಾನಗಳನ್ನು ಅಭಿವೃದ್ದಿ ಪಡಿಸಿ ಹೊಸ ಕಂಪನಿ, ಸಂಶೋಧನಾ ಸಂಸ್ಥೆ ಮತ್ತು ಸ್ಟಾರ್ಟ್ ಅಪ್ ಗಳನ್ನು ಸ್ಥಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲಿಷ್ಠ ಮತ್ತು ಸ್ವಾವಲಂಬಿ ‘ಹೊಸ ಭಾರತ’ದ ಕನಸನ್ನು ಸಾಕಾರಗೊಳಿಸಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ ಕರೆ ನೀಡಿದರು. ಅವರು ಶುಕ್ರವಾರದಂದು ಮಾಹೆಯ 30 ನೇ ಘಟಿಕೋತ್ಸವದ ಮೊದಲನೆ ದಿನ ಮತ್ತು ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ನ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ದೇಶದ ಯುವಕರ ಶಕ್ತಿಯನ್ನು ಜಗತ್ತೇ ಗುರುತಿಸುತ್ತಿದೆ. […]