ಸುತ್ತಲಿನ ಜಗತ್ತಿನ ಮಹಿಳೆಯರ ಬವಣೆಗಳೆ ಕಥೆಯ ಪಾತ್ರಗಳ ಹಿಂದಿನ ಸ್ಪೂರ್ತಿ: ವೈದೇಹಿ ಜಗತ್ತಿನಲ್ಲಿ ಕಥೆಗಾರ್ತಿಯ ಅಭಿಮತ

ಮಣಿಪಾಲ: ತಮ್ಮ ಮೇಲೆ ನಡೆಯುವ ದುರಾಡಳಿತದ ಬಗ್ಗೆ ಮಹಿಳೆಯರು ಮೌನವಿದ್ದರೂ ಒಂದು ಹಂತದ ನಂತರ ಸ್ಫೋಟಗೊಳ್ಳುತ್ತಾರೆ. ನನ್ನ ಸುತ್ತಲಿನ ಮಹಿಳೆಯರ ಜಗತ್ತು ಅವರ ವಿಧವಿಧದ ಬಳಲುವಿಕೆ ಪ್ರತಿಕ್ರಿಯಿಸಲು ಸಾಹಿತ್ಯವು ನನಗೆ ಅವಕಾಶ ನೀಡಿದೆ ಎಂದು ಖ್ಯಾತ ಲೇಖಕಿ ವೈದೇಹಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ವೈದೇಹಿ ಜಗತ್ತು-ಎರಡು ದಿನಗಳ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೈದೇಹಿ, ಅಕ್ಕು, ಅಮ್ಮಚ್ಚಿ, ಪುಟ್ಟಮ್ಮತ್ತೆ ಮುಂತಾದ ಪಾತ್ರಗಳು ತಾವು ಕಂಡ ಮನುಜ ಜಗತ್ತಿನ […]

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರಿನಲ್ಲಿ ವರ್ಲ್ಡ್ ಆಫ್ ವೈದೇಹಿ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ: ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ ‘ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದು ಬಹುಶ್ರುತ ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ವರ್ಲ್ಡ್ ಆಫ್ ವೈದೇಹಿ” ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷ ಪ್ರಧಾನ […]

ಹಿಮಾಲಕ್ಕೂ ಹಳೆಯದಾದ ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದು ಅವಶ್ಯ: ಡಾ.ವಿವೇಕ್ ಪಂಡಿ

ಮಣಿಪಾಲ: ಇಂದು ನಾವು ಪರಿಸರ ಸುಸ್ಥಿರತೆಯ ದೃಷ್ಟಿಯಿಂದ ಯೋಚಿಸದೆ, ಕೇವಲ ಆರ್ಥಿಕ ಸುಸ್ಥಿರತೆಯ ದೃಷ್ಟಿಯಿಂದ ಮಾತ್ರ ಯೋಚಿಸುತ್ತಿರುವುದು ದುರದೃಷ್ಟಕರ ವಿಚಾರ. ಹಿಮಾಲಯಕ್ಕಿಂತ ಹಳೆಯದಾದ ಪಶ್ಚಿಮ ಘಟ್ಟಗಳು ಈಗಾಗಲೇ ಜೀವೈವಿಧ್ಯವನ್ನು ಕಳೆದುಕೊಂಡು ಅಪಾರ ಹಾನಿಯನ್ನು ಅನುಭವಿಸಿವೆ ಹಾಗಾಗಿ ಇದನ್ನು ‘ಹಾಟ್‌ಸ್ಪಾಟ್‌’ ಎಂದು ಗುರುತಿಸಲಾಗಿದೆ. ಇಲ್ಲಿ ಜೀವವೈವಿಧ್ಯಗಳ ನಡುವೆ ಕ್ಲಿಷ್ಟ ಮತ್ತು ಸೂಕ್ಷ್ಮವಾದ ಪರಿಸರ ಜಾಲವಿದೆ. ಇದನ್ನು ಎಲ್ಲಾ ರೀತಿಯ ಆಕ್ರಮಣಗಳಿಂದ ರಕ್ಷಿಸಬೇಕಾಗಿದೆ ಎಂದು ಮಾಹೆಯ ಪರಿಸರಶಾಸ್ತ್ರಜ್ಞ ಡಾ.ವಿವೇಕ್ ಪಂಡಿ ನುಡಿದರು. ಅವರು ಶನಿವಾರ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ […]

ಮಲ್ಪೆ: ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮರಳು ಶಿಲ್ಪ ಕಲೆ ಅನಾವರಣ

ಮಲ್ಪೆ: ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಪಾರ್ಶ್ವವಾಯುವಿನಿಂದಾಗುವ ಗಂಭೀರ ಸ್ವರೂಪ, ಪಾರ್ಶ್ವವಾಯುವಿನ ಬಗ್ಗೆ ಜಾಗೃತಿ ಮೂಡಿಸಲು, ಪಾರ್ಶ್ವವಾಯುವಿನ ಅಪಾಯದ ಅಂಶಗಳು ಮತ್ತು ಚಿಹ್ನೆಗಳ ಬಗ್ಗೆ ಉತ್ತಮ ಸಾರ್ವಜನಿಕ ಅರಿವಿನ ಮೂಲಕ ಪಾರ್ಶ್ವವಾಯುವಿನ ಹೊರೆಯನ್ನು ಕಡಿಮೆ ಮಾಡುವ ವಿಧಾನಗಳ ಕುರಿತು ಮಾತನಾಡಲು ಉತ್ತಮ ಅವಕಾಶವನ್ನು ಈ ದಿನವು ಕಲ್ಪಿಸಿದೆ. ಈ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು […]

ಮಣಿಪಾಲ: ಮಾಹೆ ವಿದ್ಯಾ ಸಮೂಹ ಸಂಸ್ಥೆಯ 5500 ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ

ಮಣಿಪಾಲ: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರ ಸಹಯೋಗದೊಂದಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಲ್ಲಿ ನಡೆದ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ರವರು ಭಾಗವಹಿಸಿದರು. 5500 ವಿದ್ಯಾರ್ಥಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ […]