ಮಣಿಪಾಲ: ಮಾಹೆಯ ಆರ್ಕಿಟೆಕ್ಚರ್ ವಿಭಾಗದಿಂದ ಡಾ. ವಿ ಎಸ್ ಆಚಾರ್ಯ ರಸ್ತೆ ವಿನ್ಯಾಸ
![](https://udupixpress.com/wp-content/uploads/2022/10/mahe-dult.png)
ಮಣಿಪಾಲ: ನಗರ ಭೂ ಸಾರಿಗೆ ನಿರ್ದೇಶನಾಲಯ ಅಡಿಯಲ್ಲಿ ನೋಂದಾಯಿತವಾಗಿರುವ ಕೆ.ಎನ್.ಎಮ್.ಟಿ.ಎ ಯು ಕರ್ನಾಟಕದ ಶ್ರೇಣಿ 2 ಮತ್ತು ಶ್ರೇಣಿ 3 ರ ನಗರಗಳಲ್ಲಿ ಬೀದಿ ನಡಿಗೆಗಳನ್ನು ಸುಧಾರಿಸಲು ತನ್ನ ಆಸಕ್ತಿಯನ್ನು ವ್ಯಕ್ತಪಡಿಸಿದೆ. ಬೀದಿಗಳ ವಿನ್ಯಾಸ ಪ್ರಕ್ರಿಯೆಯನ್ನು ಸುಧಾರಿಸುವಲ್ಲಿ ಸಮಾಜದ ಎಲ್ಲಾ ಪಾಲುದಾರರ ಸಹಯೋಗವನ್ನು ಕೆ.ಎನ್.ಎಮ್.ಟಿ.ಎ ಹೊಂದಿದೆ. ಈ ನಿಟ್ಟಿನಲ್ಲಿ, ಉಡುಪಿ ನಗರ ಪಾಲಿಕೆಯು, ಡಾ.ವಿ.ಎಸ್.ಆಚಾರ್ಯ ರಸ್ತೆಯ ವಿನ್ಯಾಸ ಅಭಿವೃದ್ಧಿ ಪಡಿಸಲು ಇಚ್ಛೆ ವ್ಯಕ್ತಪಡಿಸಿದೆ. ಸಿಂಡಿಕೇಟ್ ವೃತ್ತದಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿವರೆಗೆ ಸರಿಸುಮಾರು 1.8 ಕಿಮೀ ಉದ್ದದ ರಸ್ತೆ […]
ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಕಳವಳಕಾರಿ: ರಘನಂದನ್
![](https://udupixpress.com/wp-content/uploads/2022/10/mahe-1.png)
ಉಡುಪಿ: ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಸಿದ್ಧಾಂತದ ಹೆಸರಿನಲ್ಲಿ ಪರದೆಯ ಮೇಲೆ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ನಲ್ಲಿ ‘ಸಿನೆಮಾದಲ್ಲಿ ಫ್ಯಾಸಿಸಂ’ ಎಂಬ ವಿಷಯದ ಕುರಿತು ಮಾತನಾಡಿದ ರಘುನಂದನ, ಜನಪ್ರಿಯ ಸಿನಿಮಾ ಪ್ರಕಾರವು ನಮ್ಮ ಸಮಾಜದ ಕೆಲವು ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತದೆ. ಕಾನೂನಿನ ಮೇಲಿನ ಗೌರವದಿಂದ ದೂರ […]
ಮಾಹೆ: ಮೊದಲ ಮಾದರಿ ವಿಶ್ವಸಂಸ್ಥೆ ಕಾರ್ಯಕ್ರಮ ಆಯೋಜನೆ
![](https://udupixpress.com/wp-content/uploads/2022/10/mahe.png)
ಮಣಿಪಾಲ: ಮಣಿಪಾಲ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿರುವ ಮಣಿಪಾಲ್ ಅಸೋಸಿಯೇಷನ್ ಆಫ್ ಫಾರ್ಮಸಿ ಸ್ಟೂಡೆಂಟ್ಸ್, ಇಂಟರ್ ನ್ಯಾಶನಲ್ ಫಾರ್ಮಾಸ್ಯುಟಿಕಲ್ ಸ್ಟುಡೆಂಟ್ಸ್ ಫೆಡರೇಷನ್, ವಿಶ್ವ ಆರೋಗ್ಯ ಅಸೆಂಬ್ಲಿ ಸಮಿತಿ ತಮ್ಮ ಮೊದಲ ಮಾದರಿ ವಿಶ್ವಸಂಸ್ಥೆ ಅನ್ನು ಆಯೋಜಿಸಿತು. “ಮಾನವೀಯ ತುರ್ತುಸ್ಥಿತಿಗಳಲ್ಲಿ ರೋಗ ನಿಯಂತ್ರಣ”ವು ವಿಶ್ವಸಂಸ್ಥೆಯ ಪರಿಹಾರ ಕಾರ್ಯಸೂಚಿಯಾಗಿತ್ತು. ಸಾರ್ವಜನಿಕ ಆರೋಗ್ಯದ ಸುಧಾರಣೆಯನ್ನು ಪ್ರತಿಪಾದಿಸಲು ಈ ವೇದಿಕೆಯು ವಿದ್ಯಾರ್ಥಿಗಳಿಗೆ ಜಾಗತಿಕ ಆರೋಗ್ಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವನ್ನು ಒದಗಿಸಿತು. ರಾಜತಾಂತ್ರಿಕತೆ ಮತ್ತು ನಾಯಕತ್ವ ಕೌಶಲ್ಯಗಳಲ್ಲಿ ಆಳವಾದ ಜ್ಞಾನವನ್ನು […]
ಮಾಹೆ: ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಪ್ರದರ್ಶನ
![](https://udupixpress.com/wp-content/uploads/2022/10/gandhian-1.png)
ಮಣಿಪಾಲ: ಬರಹಗಾರ ಮತ್ತು ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಪ್ರದರ್ಶನಗೊಂಡಿತು. ಮಾಹೆ ಪರಿಸರದಲ್ಲಿ ಬೆಳೆದ, ಸದ್ಯ ದೆಹಲಿಯಲ್ಲಿ ವಾಸಿಸುತ್ತಿರುವ ಶೆಣೈ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಬದುಕನ್ನು ಅವಲೋಕಿಸುವುದು ಮತ್ತು ವೈವಿಧ್ಯಮಯ ಚಲನಚಿತ್ರಗಳನ್ನು ನೋಡುವುದು ಉತ್ತಮ ಚಲನಚಿತ್ರವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ‘ಮಧ್ಯಂತರ’ದಲ್ಲಿನ ಹೆಚ್ಚಿನ ವಿವರಗಳು ಸಿನಿಮಾದೊಂದಿಗಿನ ಅವರ ಎರಡು ದಶಕಗಳಿಗೂ ಹೆಚ್ಚಿನ ಒಡನಾಟದ ಸಮಯದಲ್ಲಿನ ಅವಲೋಕನ ಮತ್ತು ಅನುಭವದಿಂದ ಜನಿಸಿದವುಗಳಾಗಿವೆ ಎಂದರು. ತಮ್ಮ […]
ವಿನೋಬಾ ಭಾವೆ ಅವರ ಭೂದಾನ ಚಳುವಳಿ ಗಾಂಧಿತತ್ವದ ಶ್ರೇಷ್ಠ ಉದಾಹರಣೆ: ವಿಶಂಬರನಾಥ್ ಅಗರ್ವಾಲ್
![](https://udupixpress.com/wp-content/uploads/2022/10/gandhian.png)
ಮಣಿಪಾಲ: ಭೂದಾನ ಆಂದೋಲನವು ಆಚಾರ್ಯ ವಿನೋಬಾ ಭಾವೆಯವರ ಒಂದು ಅನನ್ಯ ಕೊಡುಗೆಯಾಗಿದೆ ಮತ್ತು ಇದರ ತತ್ವ ಮತ್ತು ಕಾರ್ಯ ನಿಜವಾದ ಅರ್ಥದಲ್ಲಿ ಗಾಂಧಿವಾದದ ಮೇಲೆ ನಿಂತಿದೆ ಎಂದು ವಿದ್ವಾಂಸ ವಿಶಂಬರನಾಥ್ ಅಗರ್ವಾಲ್ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ನಡೆದ ‘ವಿನೋಬಾ ಭಾವೆ: ಜೀವನ ಮತ್ತು ತತ್ವ’ ಕುರಿತ ಉಪನ್ಯಾಸದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಯಂಪ್ರೇರಿತವಾಗಿ ಭೂಮಿ ಅಥವಾ ಹಣವನ್ನು ದಾನ ಮಾಡುವುದು ಹೆಚ್ಚು ಮಾನವೀಯ ಸಮಾಜವನ್ನು ರೂಪಿಸುವತ್ತ ನಿಜವಾದ ಗಾಂಧಿತತ್ವದ […]