ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್‌; ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಉಡುಪಿ: ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟ್ ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟ್ ಭಟ್ಕಳದತ್ತ ಮೀನುಗಾರಿಕೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಾರಂಭದಲ್ಲಿ ಮೀನಿಗೆ ಬಲೆ ಹಾಕಿ ಎಳೆದುಕೊಳ್ಳುವಾಗ ಆಕಸ್ಮಿಕವಾಗಿ ಬೋಟಿನ ಪ್ಯಾನ್‌ಗೆ ಬಲೆ ಬಿದ್ದು ಇಂಜಿನ್ ಸ್ಥಗಿತಗೊಂಡಿದೆ. ಹತ್ತಿರದಲ್ಲಿದ್ದ ಸಾಯಿ ಸಾಗರ್ ಬೋಟ್‌ನವರು ನೆರವಿಗೆ ಬಂದಿದ್ದರು. ಬಳಿಕ ಬೋಟ್‌ಅನ್ನು ಹಗ್ಗ […]