ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ರಥೋತ್ಸವ ಸಂಭ್ರಮ
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶನಿವಾರ ಕೆಂಡೋತ್ಸವ, ರವಿವಾರ ಶ್ರೀ ಮನ್ಮಹಾರಥೋತ್ಸವ ಸಂಭ್ರಮದಿಂದ ಜರಗಿತು. ಶನಿವಾರದಂದು ಕುಂಭ ಸಂಕ್ರಮಣ, ರಾತ್ರಿ ಕೆಂಡ ಸೇವೆ ನೆರವೇರಿತು. ರವಿವಾರ ಮಧ್ಯಾಹ್ನ ರಥಾವರೋಹಣ, ತಾಲೀಮು, ಸಂಜೆ ರಥೋತ್ಸವ, ಆಕರ್ಷಕ ಸುಡುಮದ್ದು ಪ್ರದರ್ಶನ ನೆರವೇರಿತು. ಈ ಸಂದರ್ಭದಲ್ಲಿ ಸಹಸ್ರಾರು ಭಕ್ತಾರು ಪಾಲ್ಗೊಂಡಿದರು. ಕೆಂಡಸೇವೆ ಮತ್ತು ರಥೋತ್ಸವ ಪ್ರಯುಕ್ತ ಮಹಾ ಅನ್ನಸಂತರ್ಪಣೆ ಜರಗಿತು. ಕಾರ್ಯನಿರ್ವಹಣ ಅಧಿಕಾರಿ ಎಸ್.ಪಿ.ಬಿ. ಮಹೇಶ, ಅನುವಂಶಿಕ ಮೊಕ್ತೇಸರರಾದ ಧನಂಜಯ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ, ಎಚ್. ಶಂಭು […]