ಮಂಗಳೂರು: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17 ರವರೆಗೆ  ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ.  ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು  ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು […]

ಬೆಳುವಾಯಿ–ಕಾಂತಾವರ ಮಾರ್ಗದಲ್ಲಿ ಗೊಂದಲ; ಬಸ್–ಕಾರು ಮುಖಾಮುಖಿ

ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ […]

ಉದ್ಯೋಗಾವಕಾಶ: ಮೇ 30, ಜೂ.1 ರಂದು ಸಂದರ್ಶನ

ಮಂಗಳೂರು: ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಲಯಾಳಂ/ಹಿಂದಿ/ಇಂಗ್ಲಿಷ್/ತಮಿಳು ಭಾಷೆ ತಿಳಿದಿರಬೇಕು. ಬ್ಲಿಂಕಿಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗೆ […]

ಮಂಗಳೂರು ಕದ್ರಿ ಉದ್ಯಾನವನದಲ್ಲಿ ಮೇ 28ರಿಂದ ಮಾವು ಮೇಳ

ಮಂಗಳೂರು: ರಾಮನಗರ ಜಿಲ್ಲಾ ಮಾವು ಬೆಳೆಗಾರರ ಮಾರಾಟ ಸಂಘ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೇ 28ರಿಂದ 31ರವರೆಗೆ ಕದ್ರಿ ಉದ್ಯಾನವನದಲ್ಲಿKadri Park ನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಲಾದ ವಿವಿಧ ತಳಿಯ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರಲಿವೆ ಎಂದು ತಿಳಿಸಿದರು. ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ ಹಾಗೂ ಬೆಂಗನಪಳ್ಳಿ ಶುಗರ್ ಬೇಬಿ ಸೇರಿದಂತೆ ಹಲವು […]

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಹಾಸನದ ಕೃಷಿಕನನ್ನು ರಕ್ಷಿಸಿದ ಮಂಗಳೂರು ಪೊಲೀಸರು

ಮಂಗಳೂರು: ನಗರದ ಹೊರವಲಯದ ಕೂಳೂರು ಸೇತುವೆ Kuloor Bridge ಸಮೀಪದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಹಾಸನ ಜಿಲ್ಲೆಯ Hassan District ಜಿಲ್ಲೆಯ ಕೃಷಿಕನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಸಮೀಪದ ಹಳ್ಳಿಯ ನಿವಾಸಿಯಾಗಿರುವ ಕೃಷಿಕ ಆರೋಗ್ಯ ಹಾಗೂ ಹಣಕಾಸಿನ ಸಮಸ್ಯೆಯಿಂದ ಮನನೊಂದು ಶುಕ್ರವಾರ ಬೆಳಗ್ಗೆ ಮನೆಯಿಂದ ಯಾರಿಗೂ ತಿಳಿಸದೆ ಹೊರಟಿದ್ದರು. ಮೊಬೈಲ್‌ಫೋನ್ ಆನ್‌ನಲ್ಲಿದ್ದ ಕಾರಣ ಮನೆಯವರು ನಿರಂತರ ಕರೆ ಮಾಡಿ ಮನೆಗೆ ಮರಳುವಂತೆ ಮನವಿ […]