ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಮಂಗಳೂರು: ಕರಾವಳಿ ಕರ್ನಾಟಕದ ಪ್ರಥಮ ನಗರ ಕೇಂದ್ರಿತ ಕೋ-ಆಪ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಲಿಮಿಟೆಡ್ನ ಸಂಸ್ಥಾಪಕರ ದಿನವನ್ನು ಮೇ 7 ರಂದು ಬ್ಯಾಂಕಿನ ಆಡಳಿತ ಕಚೇರಿ ಆವರಣದಲ್ಲಿ 111 ವರ್ಷಗಳ ಸಮರ್ಪಿತ ಸಮಾಜ ಸೇವೆಯನ್ನು ಪೂರ್ಣಗೊಳಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಫಾ.ಬೋನವೆಂಚರ್ ನಜರೆತ್ ಅವರು ಪವಿತ್ರ ಪೂಜೆಯನ್ನು ನೆರವೇರಿಸಿ ಈ ದಿನದ ಮಹತ್ವವನ್ನು ವಿವರಿಸಿದರು. ದೂರದೃಷ್ಟಿಯ ಸಂಸ್ಥಾಪಕ ಪಿಎಫ್ಎಕ್ಸ್ ಸಲ್ಡಾನ್ಹಾ ಅವರು ಸಮಾಜದ ಅನುಕೂಲಕ್ಕಾಗಿ ಸ್ಥಾಪಿಸಿದ ಶ್ರೇಷ್ಠ ಸಂಸ್ಥೆಯ ಉದಾತ್ತ ಕಾರ್ಯವನ್ನು ಸ್ಮರಿಸಿದರು. ಕಳೆದ […]
ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ಬೆಂಗಳೂರು ಮಳಿಗೆಗೆ ಕ್ಯಾಷಿಯರ್, ಫೀಲ್ಡ್ ಮತ್ತು ಮಾರ್ಕೆಂಟಿಗ್ ಸ್ಟಾಫ್, ಸೇಲ್ಸ್ ಸ್ಟಾಫ್ ಹಾಗೂ ಆಫೀಸ್ ಅಸಿಸ್ಸ್ಟೆಂಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಚಿನ್ನಾಭರಣ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವವಿರುವವರು ಮೇ 2 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಬೆಂದೂರಿನಲ್ಲಿರುವ ಎಸ್.ಸಿಎಸ್ ಹಾಸ್ಪಿಟಲ್ ಬಳಿ ಇರುವ ಭೀಮಾ ಸಂಸ್ಥೆಯ ಮಳಿಗೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ಕನ್ನಡ ಬಲ್ಲವರಾಗಿರಬೇಕು. ಜೊತೆಗೆ ಮಲೆಯಾಳಿ, ತಮಿಳು, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ […]
ಮಂಗಳೂರಿನಲ್ಲಿ ಪೆಜಕಾಯಿ ಕೊಯ್ದು ಸಂಭ್ರಮಿಸಿದ ಕರಾವಳಿ ಕುವರಿ ಪೂಜಾ ಹೆಗ್ಡೆ

ಮಂಗಳೂರು: ತಮ್ಮ ಚಿತ್ರ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಪ್ರಚಾರ ಕಾರ್ಯ ಹಾಗೂ ಚಿತ್ರ ಬಿಡುಗಡೆಯಲ್ಲಿ ವ್ಯಸ್ತರಾಗಿದ್ದ ಪೂಜಾ ಹೆಗ್ಡೆ, ತಮ್ಮ ಹುಟ್ಟೂರಿಗೆ ಸಣ್ಣದೊಂದು ಭೇಟಿ ನೀಡಿದ್ದು, ಆ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. “ಎ ಕ್ವಿಕ್ ಟ್ರಿಪ್ ಬ್ಯಾಕ್ ಹೋಮ್” ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮತ್ತು ವಿಡೀಯೋ ಹಂಚಿಕೊಂಡಿರುವ ಅವರು, ಮಂಗಳೂರಿನಲ್ಲಿರುವ ತಮ್ಮ ಮನೆಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಮಂಗಳೂರಿನ ಜನತೆಗೆ ಚಿರಪರಿಚಿತ “ಪೆಜಕಾಯಿ” ಕೊಯ್ಯುವ ಚಿತ್ರ, ತಂದೆ ಹಾಗೂ ಮುದ್ದಿನ ಬ್ರೌನಿಯ […]
ರೈಲ್ವೆ ಹಳಿ ವಿಸ್ತರಣೆ ಕಾರ್ಯ ಮುಗಿದ ನಂತರ ತಿರುವನಂತಪುರಂ-ಮಂಗಳೂರು ನಡುವೆ ವಂದೇ ಭಾರತ್ ವಿಸ್ತರಣೆ ಸಾಧ್ಯತೆ

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವನಂತಪುರಂನಿಂದ ಕಾಸರಗೋಡಿಗೆ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ರೈಲನ್ನು ಮುಂದಿನ ದಿನಗಳಲ್ಲಿ ಮಂಗಳೂರಿನವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ಬಾವುಟ ತೋರಿದ ನಂತರ ತಮ್ಮ ಭಾಷಣದಲ್ಲಿ, ತಿರುವನಂತಪುರಂ-ಶೋರನೂರು ವಿಭಾಗದಲ್ಲಿ ರೈಲ್ವೆ ಹಳಿ ವಿಸ್ತರಣೆ ಕಾರ್ಯ ಮುಗಿದ ನಂತರ ತಿರುವನಂತಪುರಂ ಮತ್ತು ಮಂಗಳೂರು ನಡುವೆ ಸೆಮಿ ಹೈಸ್ಪೀಡ್ ರೈಲುಗಳನ್ನು ಓಡಿಸಬಹುದು ಎಂದು ಪ್ರಧಾನಿ ಮೋದಿ ಹೇಳಿದರು. ಸಿಗ್ನಲಿಂಗ್ ವ್ಯವಸ್ಥೆಯನ್ನು ಸುಧಾರಿಸಿದ ನಂತರ […]
ಮಂಗಳೂರು: ಎಕ್ಸ್ ಪರ್ಟ್ ಕಾಲೇಜಿನ 99 ಶೇ. ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್ಬೈಲ್ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಶೇ. 99.52 ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. 590 ಕ್ಕಿಂತ ಅಧಿಕ ಅಂಕವನ್ನು 6 ವಿದ್ಯಾರ್ಥಿಗಳು, 580 ಕ್ಕಿಂತ ಅಧಿಕ ಅಂಕವನ್ನು 62, ಶೇ. 95 ಕ್ಕಿಂತ ಅಧಿಕ ಅಂಕವನ್ನು 231, ಶೇ.90 ಕ್ಕಿಂತ ಅಧಿಕ ಅಂಕವನ್ನು 759, ಶೇ.85 ಕ್ಕಿಂತ […]