ಬಹುಮುಖ ಪ್ರತಿಭೆ ಮುದ್ದು ಮೂಡುಬೆಳ್ಳೆಯವರಿಗೆ ರಂಗ ಚಾವಡಿ 2022 ಪ್ರಶಸ್ತಿ

ಮಂಗಳೂರು: ಪ್ರತಿಷ್ಠಿತ ರಂಗ ಚಾವಡಿ 2022ರ ಪ್ರಶಸ್ತಿಗೆ ಸಾಹಿತಿ, ಜಾನಪದ ವಿದ್ವಾಂಸ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನವಂಬರ್ 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಇವರು ತನ್ನ16 ನೇ ವಯಸ್ಸಿನಿಂದ ಜಾನಪದ ಸಾಹಿತ್ಯದ ಕಡೆಗೆ ಆಕರ್ಷಿತರಾಗಿದ್ದಾರೆ. ಸರಕಾರದ ನ್ಯಾಯಾಂಗ ಹಾಗೂ ಪ್ರಸಾರ ಇಲಾಖೆಯಲ್ಲಿ ಹಾಗೂ ಆಕಾಶವಾಣಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿಯೂ […]

ಮಂಗಳೂರು: ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ಅಭಾವಿಪ ಪ್ರತಿಭಟನೆ

ಮಂಗಳೂರು: ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಹದಗೆಟ್ಟಿದೆ. ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಇನ್ನೂ ದೊರೆತಿಲ್ಲ. ಸರಕಾರವು ಈ ವಿಷಯದ ಕುರಿತು ತುರ್ತು ಗಮನ ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ […]

ತ್ರಿಶಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಮಂಗಳೂರು: ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ನ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಲೆಕ್ಕ ಪರಿಶೋಧಕ ಗೋಪಾಲಕೃಷ್ಣ ಭಟ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಎಂಬುದು ವಿದ್ಯಾರ್ಥಿಯಲ್ಲಿನ ಅಂತಃ ಶಕ್ತಿಯನ್ನು ಹೊರ ತರುವ ಸಾಧನವಾಗಿದೆ. ಪರಿಶ್ರಮದ ಮೂಲಕ ಮಾತ್ರ ಸಾಧನೆ ಎನ್ನುವುದು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜಿನ ಶೈಕ್ಷಣಿಕ ಆಡಳಿತ ಸಲಹೆಗಾರ ನಾರಾಯಣ್ […]

ಪ್ರತಿಭಾ ಕುಳಾಯಿ ಮಾನಹಾನಿಕರ ಪೋಸ್ಟ್ ಪ್ರಕರಣ: ಎರಡನೇ ಆರೋಪಿ ನ್ಯಾಯಾಲಯಕ್ಕೆ ಹಾಜರ್

ಮಂಗಳೂರು: ಕಾಂಗ್ರೆಸ್ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್.ಶೆಟ್ಟಿ ಗುರುವಾರದಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ನ್ಯಾಯಾಲಯಕ್ಕೆ ಹಾಜರಾಗಿರುವ ಆತನನ್ನು ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಶೆಟ್ಟಿ ಪೋಸ್ಟ್ ಮಾಡಿದ ಪೋಸ್ಟ್ ಗೆ ಶ್ಯಾಮ್ ಸುದರ್ಶನ್ ಭಟ್ ಎನ್ನುವವರು ಅಸಭ್ಯ ಟಿಪ್ಪಣಿಯನ್ನು ಬರೆದಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ […]

ತ್ರಿಶಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಹಾಗೂ ವೈ.ಆರ್. ಸಿ. ಸ್ವಯಂಸೇವಕರಿಗೆ ಮಾಹಿತಿ ಕಾರ್ಯಗಾರ

ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಮತ್ತು ಯೂತ್ ರೆಡ್ ಕ್ರಾಸ್ (ವೈ.ಆರ್.ಸಿ.) ಘಟಕಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಸ್ವಯಂ ಸೇವಕರಿಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ಕಾಲೇಜು ಮಂಗಳೂರಿನ ಕಾರ್ಯತಂತ್ರ ಯೋಜನಾ ವಿಭಾಗದ ಮುಖ್ಯಸ್ಥ ರಮೇಶ್ ಕೆ.ಜಿ., ವ್ಯಕ್ತಿಯೊಬ್ಬನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಎನ್.ಎಸ್.ಎಸ್ ಮತ್ತು ವೈ.ಆರ್.ಸಿ. ಗಳ ಪಾತ್ರ ಬಹಳ ಮಹತ್ವದ್ದಾಗಿದೆ. […]