ಮಂಗಳೂರಿನಲ್ಲಿ ರದ್ದಾದ ಕಾವೇರಿ ಆನ್ ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇತಕ್ಕೆ? ರಮೇಶ್ ಕಾಂಚನ್ ಆರೋಪ

ಉಡುಪಿ: ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು […]

ದ.ಕ ಜಿಲ್ಲೆ ಹೊಸ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಮ್ ಅವರನ್ನು ಎಸ್ಪಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಇಲ್ಲಿಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನೇಮಕ ಮಾಡಲಾಗಿದೆ. ಅಮಾತೆ ವಿಕ್ರಮ್ […]

ಅತಿಯಾದ ಮೊಬೈಲ್ ಬಳಕೆಗೆ ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮಂಗಳೂರು: ಅತಿಯಾದ ಮೊಬೈಲ್ ಬಳಕೆಗೆ ತಾಯಿ ಬೈದಿದ್ದಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 30ರಂದು ನಡೆದಿದೆ. ಮೃತ ಬಾಲಕನನ್ನು ಜ್ಞಾನೇಶ್(14) ಎಂದು ಗುರುತಿಸಲಾಗಿದೆ. ಪದವು ಬಿ ಹಳ್ಳಿಯ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಜ್ಞಾನೇಶ್, ಜಗದೀಶ್ ಮತ್ತು ವಿನಯಾ ದಂಪತಿಯ ಪುತ್ರ. ಈತ ನಿರಂತರವಾಗಿ ಮೊಬೈಲ್ ಬಳಸುತ್ತಿದ್ದ ಮತ್ತು ಈ ಕಾರಣಕ್ಕಾಗಿ ಈತನ ತಾಯಿ ಈತನಿಗೆ ಬೈದಿದ್ದಾರೆ. ತಾಯಿಯ ಬೈಗುಳದ ಬಳಿಕ, ಸ್ನಾನ ಮಾಡಿ ಬರುವುದಾಗಿ […]

ಬಂಗ್ರಕೂಳೂರು: ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಜ.22 ರಂದು ನಡೆದ ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 19 ಜೊತೆ ನೇಗಿಲು ಹಿರಿಯ: 29 ಜೊತೆ ಹಗ್ಗ ಕಿರಿಯ: 19 ಜೊತೆ ನೇಗಿಲು ಕಿರಿಯ: 78 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ ಕನೆಹಲಗೆ: ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ […]

ಮಂಗಳೂರು: ಜ.31 ರಂದು ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ

ಮಂಗಳೂರು: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಜ.31 ಮಂಗಳವಾರದಂದು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 25 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಹತ್ತನೇ ತರಗತಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವೀಧರರು […]