ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಸನ್ನಕುಮಾರ್ ಅವರಿಗೆ ಪಿ.ಎಚ್.ಡಿ.

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರಸನ್ನಕುಮಾರ್ ಆರ್ ಇವರು ಸಲ್ಲಿಸಿದ “ಸ್ಟಡಿ ಆಫ್ ಸ್ಟ್ರಕ್ಚರಲ್, ಆಪ್ಟಿಕಲ್‌ ಆ್ಯಂಡ್ ಮ್ಯಾಗ್ನೆಟಿಕ್ ಪ್ರೋಪರ್ಟೀಸ್‌ ಆಫ್‌ ಎಮ್‌ ಎನ್ ಕೊ ಆ್ಯಂಡ್‌ ಡಿವೈಡೊಪ್ಡ್ ಬಿಸ್ಮತ್ ಫೆರೈಟ್‌ಥಿನ್‌ಫಿಲ್ಮ್ಸ್” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿಯನ್ನುನೀಡಿ ಗೌರವಿಸಿದೆ. ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಗೋಪಾಲಕೃಷ್ಣ ನಾಯಕ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಇವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ರಾಮಶೆಟ್ಟಿ ಮತ್ತು ನಾಗಮ್ಮ ದಂಪತಿಗಳ ಪುತ್ರರಾಗಿದ್ದಾ

ಉಡುಪಿ-ಮಂಗಳೂರು ಲಯನ್ಸ್ ಕ್ಲಬ್ ಗಳ ಸಮಾಗಮ

ಉಡುಪಿ: ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಉಡುಪಿ ಮತ್ತು ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮಂಗಳೂರು ಈ ಎರಡು ಕ್ಲಬ್ ಗಳ ಸಮಾಗಮವು ಇತ್ತೀಚಿಗೆ ಉಡುಪಿಯ ಬಲೈಪಾದೆ ನಿತ್ಯಾನಂದ ಆರ್ಕೇಡ್ ಕಾಂಪ್ಲೆಕ್ಸ್ ಉದ್ಯಾವರ ಇಲ್ಲಿ ನೆರವೇರಿತು. ಜಿಲ್ಲಾ 317ಸಿಯ ಪ್ರಥಮ ಉಪ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನೆಲಿಯೋ ಮುಖ್ಯ ಅತಿಥಿಯಾಗಿ ಮಾತನಾಡಿ, ಈ ರೀತಿಯ ಸಂಗಮ ಎರಡು ಜಿಲ್ಲೆಗಳ ಲಯನ್ ಸದಸ್ಯರು ಸಮಾಜಕ್ಕೆ ಇನ್ನೂ ಹೆಚ್ಚಿನ ಅಗತ್ಯ ಸೇವೆಗಳನ್ನು ಮಾಡುವ ಬಗ್ಗೆ ಮತ್ತು ಕ್ಲಬ್ ಗಳ ಮಧ್ಯೆ […]

ಕಾಂತಾರ ವೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರಿವಾರ

ಮಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಮಂಗಳೂರಿನ ಚಲನಚಿತ್ರ ಮಂದಿರದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ರಿಷಬ್ ಶೆಟ್ಟಿ ಅಭಿಯನದ ಕಾಂತಾರ ಚಿತ್ರ ವೀಕ್ಷಣೆ ಮಾಡಿದರು. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಗ್ಗಡೆಯವರು ಚಿತ್ರದ ತಮ್ಮ ಅನುಭವವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ನೋಡುವುದು ಕಡಿಮೆಯಾಗಿತ್ತು. ಕರ್ನಾಟಕದ ಒಂದು ಭಾಗದ ವಿಶೇಷ ಅನುಭವಗಳು, ನಂಬಿಕೆ, ನಡವಳಿಕೆಗಳು ಮತ್ತು ದೈವಾರಾಧನೆಯಲ್ಲಿರುವ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ರಿಷಭ್ ಶೆಟ್ಟಿ ಈ ಚಿತ್ರದಲ್ಲಿ […]

ಟ್ರೊಲ್ ಗೆ ಹೆದರುವ ಹೆಣ್ಣುಮಗಳು ನಾನಲ್ಲ; ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಪ್ರತಿಭಾ ಕುಳಾಯಿ 

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ಇದಕ್ಕೆಲ್ಲ ಹೆದರುವ ಹೆಣ್ಣು ಮಗಳು ನಾನಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಳ್ಳಲು ಶಕ್ತಿ ಸ್ಪೂರ್ತಿಯನ್ನು ತುಂಬುತ್ತದೆ. ನಿಮ್ಮ ಅಭಿಮಾನಕ್ಕೆ ಚಿರಋಣಿ ಎಂದು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಬಿಜೆಪಿ […]

ವ್ಯಕ್ತಿಯೋರ್ವರ ಜೀವ ಉಳಿಸಲು ತನ್ನ ರೈಲನ್ನೇ ತಪ್ಪಿಸಿಕೊಂಡ ಬಂಟ್ವಾಳದ ಆಪದ್ಭಾಂಧವೆ

ಬಂಟ್ವಾಳ: ತಮ್ಮ ರೈಲನ್ನೆ ತಪ್ಪಿಸಿಕೊಂಡು ವ್ಯಕ್ತಿಯೊಬ್ಬರ ನೆರವಿಗೆ ಧಾವಿಸಿ ಅವರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸೆ.28 ರಂದು ಸಂಭವಿಸಿದೆ. ನೆಲ್ಯಾಡಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಹೇಮಾವತಿ ಎನ್ನುವವರೇ ಆ ಆಪದ್ಬಾಂಧವೆ. ಹೇಮಾವತಿ ಅವರು ಸೆ.28 ರಂದು ಬಂಟ್ವಾಳದಿಂದ ಬೆಂಗಳೂರಿಗೆ ಪ್ರಯಾಣಿಸಲು ಬಂಟ್ವಾಳ ರೈಲ್ವೆ ನಿಲ್ದಾಣ್ದಕ್ಕೆ ಬಂದಿದ್ದು, ತಮ್ಮ ರೈಲಿನ ಬರುವಿಕೆಗಾಗಿ ಕಾಯುತ್ತಿದ್ದರು. ಅದಾಗಲೇ ಅವರ ಬೆನ್ನಹಿಂದೆ ದೊಡ್ಡದಾದ ಒಂದು ಶಬ್ದ ಕೇಳಿಸಿ ಹಿಂತಿರುಗಿ ನೋಡಿದಾಗ ಸುಮಾರು 50 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕುಸಿದು […]