ಬೆಂಗಳೂರು-ಮಂಗಳೂರು ಮಾರ್ಗಕ್ಕೆ ಗತಿ ಶಕ್ತಿ: ರಾ.ಹೆ -75ರ ನೆಲಮಂಗಲ-ದೇವಿಹಳ್ಳಿ ರಸ್ತೆ ಕಾಮಗಾರಿ ಸಂಪೂರ್ಣ

ಬೆಂಗಳೂರು: ಬೆಂಗಳೂರು-ಮಂಗಳೂರು ರಾ.ಹೆ-75 ರಲ್ಲಿ ನೆಲಮಂಗಲ-ದೇವಿಹಳ್ಳಿ ನಡುವಿನ ವಿಭಾಗವನ್ನು ಯಶಸ್ವಿಯಾಗಿ ನಿರ್ಮಿಸಲಾಗಿದೆ. ಈ ವಿಭಾಗವು ಮೈಸೂರು, ಸಕಲೇಶಪುರ, ಹೆಳೇಬೀಡು, ಧರ್ಮಸ್ಥಳ ಮುಂತಾದ ಪ್ರವಾಸಿ ತಾಣಗಳಿಗೆ ವೇಗದ ಸಂಪರ್ಕವನ್ನು ಸಶಕ್ತಗೊಳಿಸುತ್ತದೆ . ವಾರಾಂತ್ಯದಲ್ಲಿ ಈ ಮಾರ್ಗವು ಸುಮಾರು 30000 ವಾಹನಗಳನ್ನು ಧಾರಣೆ ಮಾಡುವ ಸಾಮಾರ್ಥ್ಯ ಹೊಂದಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದು ಬೆಂಗಳೂರು-ಮಂಗಳೂರು, ಬೆಂಗಳೂರು-ಮೈಸೂರು, ಬೆಂಗಳೂರು-ಹಾಸನ-ಸಕಲೇಶಪುರ-ಧರ್ಮಸ್ಥಳವನ್ನು ಸಂಪರ್ಕಿಸುವ ಮಾರ್ಗವಾಗಿಯೂ ಕಾರ್ಯನಿರ್ವಹಿಸುತ್ತದೆ. ಮೈಕ್ರೊ-ಸರ್ಫೇಸಿಂಗ್ ಮಿಶ್ರಣದ ಬಾಗುವ ಶಕ್ತಿಯನ್ನು ಹೆಚ್ಚಿಸಲು ಫೈಬರ್ ಬಲವರ್ಧಿತ […]
ಮಂಗಳೂರು: ಲವ್ ಜಿಹಾದ್ ಸಂತ್ರಸ್ತರಿಗಾಗಿ ಹಿಂದೂ ಸಂಘಟನೆಗಳ ವತಿಯಿಂದ ಸಹಾಯವಾಣಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಅನ್ಯ ಹಿಂದೂ ಸಂಘಟನೆಗಳ ವತಿಯಿಂದ ಲವ್ ಜಿಹಾದ್ ಸಂತ್ರಸ್ತರಿಗಾಗಿ ವಿನೂತನ ಮಾದರಿಯ ಸಹಾಯವಾಣಿಯೊಂದನ್ನು ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸಕ್ಕೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದು, ಅಂಥಹವರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ಇಂತಹ ಸಂತ್ರಸ್ತರಿದ್ದಲ್ಲಿ 9148658108 ಗೆ ಕರೆ ಮಾಡಬಹುದು ಅಥವಾ 9591658108 ಗೆ ವಾಟ್ಸ್ ಆಪ್ ಮಾಡಬಹುದು ಅಥವಾ [email protected] ಗೆ ಇ-ಮೇಲ್ ಕಳುಹಿಸಬಹುದು […]
ಕದ್ರಿ ಲಯನ್ಸ್ ಕನ್ನಡ ರತ್ನ ಪ್ರಶಸ್ತಿಗೆ ಕಾದಂಬರಿಕಾರ ವಿವೇಕಾನಂದ ಕಾಮತ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳನೊಳಗೊಂಡ ಲಯನ್ಸ್ ಜಿಲ್ಲೆ 317ಡಿಯ ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಪ್ರತಿ ವರ್ಷ ಕನ್ನಡದ ಯುವ ಸಾಹಿತಿಗಳು, ಸಾಂಸ್ಕೃತಿಕ ಸಾಧಕರು, ಸಂಘಟಕರಿಗೆ ನೀಡುವ ಕದ್ರಿ ಲಯನ್ಸ್ ಕನ್ನಡ ರತ್ನ (ಕಲಕ) ಪ್ರಶಸ್ತಿಯ 2022ನೇ ಸಾಲಿಗೆ ಸಾಹಿತಿ, ಕಾದಂಬರಿಕಾರ ವಿವೇಕಾನಂದ ಕಾಮತ್ ಇವರು ಆಯ್ಕೆಯಾಗಿದ್ದಾರೆ. ಸಿವಿಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, 1998ರಿಂದ ಬರವಣಿಗೆಯಲ್ಲಿ ತೊಡಗಿಸಿಕೊಂಡು 150ಕ್ಕೂ ಹೆಚ್ಚು ಕಥೆಗಳನ್ನು ಬರೆದಿದ್ದಾರೆ. ಮುಖ್ಯವಾಗಿ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ಇವರ […]
ಕಳತ್ತೂರು: ವಿಶ್ವ ಬಂಟರ ಪ್ರತಿಷ್ಠಾನ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಾಣ

ಕಳತ್ತೂರು: ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಆಡಳಿತ ನಿರ್ದೇಶಕ ಶಶಿಕಿರಣ್ ಶೆಟ್ಟಿ ಇವರು ಮಂಗಳೂರಿನ ಉದ್ಯಮಿ ಎ.ಜೆ.ಶೆಟ್ಟಿ ಅಧ್ಯಕ್ಷತೆಯ ವಿಶ್ವ ಬಂಟರ ಪ್ರತಿಷ್ಠಾನಕ್ಕೆ 8 ಲಕ್ಷ ರೂ ಆರ್ಥಿಕ ಸಹಾಯ ನೀಡಿದ್ದು, ಆ ಮೂಲಕ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಿಸಿಕೊಡಲಾಗಿದೆ. ಒಟ್ಟು 17 ಮನೆ ನಿರ್ಮಾಣಗೊಂಡಿದ್ದು ಅದರಲ್ಲಿ ಕಾಸರಗೋಡಿನಲ್ಲಿ 7, ಮಂಗಳೂರಿನಲ್ಲಿ 5, ಕುಂದಾಪುರದಲ್ಲಿ 1 ಹಾಗೂ ಕಾಪು ತಾಲೂಕಿನ ಕಳತ್ತೂರು ಗ್ರಾಮದಲ್ಲಿ 4 ಮನೆಗಳನ್ನು ನಿರ್ಮಿಸಲಾಗಿದೆ. ಮಂಗಳೂರಿನಲ್ಲಿ ನಡೆದ ವಿಶ್ವ ಬಂಟರ ಪ್ರತಿಷ್ಠಾನ […]
ಕುಲಾಲರ ಮಾತೃ ಸಂಘದ ಮಹಿಳಾ ವಿಭಾಗದ ವತಿಯಿಂದ ಶ್ರೀ ದೇವಿಗೆ ಸ್ವರ್ಣ ಮಲ್ಲಿಗೆ ಹಾರ ಸಮರ್ಪಣೆ

ಮಂಗಳೂರು: ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಹಿಳಾ ವಿಭಾಗದ ನೇತೃತ್ವದಲ್ಲಿ ಡಿ.18 ಭಾನುವಾರದಂದು ಸಂಜೆ 5 ಗಂಟೆಗೆ ಸಮಾಜದ ಭಕ್ತಿಯ ಕಾಣಿಕೆಯಾಗಿ ಶ್ರೀ ದೇವಿಗೆ ಚಿನ್ನದ ಮಲ್ಲಿಗೆ ಹಾರ ಹಾಗೂ ಮಲ್ಲಿಗೆ ಹೂವಿನ ಅಲಂಕಾರ ಸೇವೆಯನ್ನು ಸಮರ್ಪಿಸಲಾಯಿತು. ಮಹಿಳಾ ವಿಭಾಗದ ಸದಸ್ಯೆಯರು ಸ್ವರ್ಣ ಹಾರವನ್ನು ಚೆಂಡೆ ವಾದ್ಯ ಕಲಶಗಳ ಸಹಿತ ಮರೆವಣಿಗೆಯ ಮೂಲಕ ಶ್ರೀದೇವಿಗೆ ಸಮರ್ಪಿಸಿದರು. ಈ ಸ್ವರ್ಣ ಮಲ್ಲಿಗೆ ಹಾರವನ್ನು ಮಂಗಳೂರಿನ ಪ್ರಖ್ಯಾತ ಜ್ಯುವೆಲ್ಲರಿ ಸಂಸ್ಥೆಯಾದ ಭೀಮಾ ಜ್ಯುವೆಲರ್ಸ್ ನವರು ತಯಾರಿಸಿದ್ದು, […]