ಇಂಡಿಯನ್‌ ಆಯಿಲ್‌ ಹಾಗೂ ಎಂಆರ್‌ಪಿಎಲ್‌ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ (IOCL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಮೆಕ್ಯಾನಿಕಲ್, ಇಲೆಕ್ಟ್ರೀಷಿಯನ್, ಇನ್‌ಸ್ಟ್ರುಮೆಂಟೇಷನ್‌, ಸಿವಿಲ್, ಫಿಟ್ಟರ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಮಷಿನಿಸ್ಟ್‌, ಡಾಟಾ ಎಂಟ್ರಿ ಆಪರೇಟರ್, ಹೀಗೆ ಹಲವು ವಿಭಾಗಗಳಲ್ಲಿ ತರಬೇತಿಗೆ ಅಭ್ಯರ್ಥಿಗಳನ್ನು ನಿಯೋಜಿಸಲಾಗುತ್ತದೆ. ರಾಜ್ಯ ಹಾಗೂ ಟ್ರೇಡ್‌ / ಟೆಕ್ನೀಷಿಯನ್ / ಗ್ರಾಜುಯೇಟ್‌ವಾರು ಹುದ್ದೆಗಳ ಸಂಖ್ಯೆಗಳನ್ನು ಕೆಳಗಿನ ನೋಟಿಫಿಕೇಶನ್‌ನಲ್ಲಿ ಓದಿ ತಿಳಿಯಬಹುದು. […]

ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು: ಬದಲಾಯಿತು ಜಿಲ್ಲಾ ಕಚೇರಿಯ ವಾಸ್ತು?

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಕಾಮಗಾರಿ ನಡೆಯುತ್ತಿದ್ದು, ವಾಸ್ತುಶಾಸ್ತ್ರದಲ್ಲಿ ನಂಬಿಕೆ ಇಟ್ಟಿರುವ ಪಕ್ಷದ ಮುಖಂಡರೊಬ್ಬರು ಅಧ್ಯಕ್ಷರ ಅನುಮತಿ ಮೇರೆಗೆ ಈ ನವೀಕರಣ ಕಾಮಗಾರಿ ನಡೆಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್‌ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಸೇರಿದಂತೆ ಇತರ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ವಾಸ್ತುದೋಷ ನಿವಾರಣೆಗಾಗಿ ಈ ಕೆಲಸ ಮಾಡಲಾಗಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಇದನ್ನು ತಳ್ಳಿ ಹಾಕಿರುವ ಕಾಂಗ್ರೆಸ್‌, ನೀರಿನ ಟ್ಯಾಂಕಿಯ ಮತ್ತು ಮೆಟ್ಟಿಲಿನ ದುರಸ್ತಿ ಮಾಡಲಾಗಿದೆ ಎಂದಿದ್ದಾರೆ. […]

ಮಂಗಳೂರು: ಫ್ರೆಶರ್‌ಗಳಿಗಾಗಿ ಡಿ.16 ರಂದು ಇನ್ಫೋಸಿಸ್ ನಲ್ಲಿ ಸಂದರ್ಶನ

ಮಂಗಳೂರು:ಬಿಎ,ಬಿಕಾಂ, ಎಂಕಾಂ, ಬಿಬಿಎ ಫ್ರೆಶರ್‌ಗಳಿಗೆ ಇನ್ಫೋಸಿಸ್‌ನಲ್ಲಿ ಸಂದರ್ಶನವನ್ನು ಡಿ.16 ರಂದು ಇನ್ಫೋಸಿಸ್ ಮಂಗಳೂರು ಮುಡಿಪು ಕಚೇರಿಯಲ್ಲಿ ನಿಗದಿಪಡಿಸಲಾಗಿದೆ. ನಿಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.

ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಪರಿವಾರದಿಂದ ಅಂಗಾಂಗ ದಾನ

ಮಂಗಳೂರು: ಅಪಘಾತದ ನಂತರ ಮೆದುಳು ನಿಷ್ಕ್ರಿಯಗೊಂಡ 37 ವರ್ಷದ ಅಪಘಾತ ಸಂತ್ರಸ್ತರ ಅಂಗಾಂಗಗಳನ್ನು ಆತನ ಪರಿವಾರದವರ ಸಮ್ಮತಿಯ ಮೇರೆಗೆ ಅವಶ್ಯವಿದ್ದವರಿಗೆ ದಾನ ಮಾಡಲಾಗಿದೆ. ಮಂಗಳೂರಿನ ಫಾ. ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರದಂದು ಶಸ್ತ್ರಚಿಕಿತ್ಸೆ ನಡೆಸಿ, ಅಂಗಾಗಗಳನ್ನು ಇತರ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮೂಡಿಗೆರೆಯ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಹೆಚ್ ಎಂ ಎಂಬವರು ಡಿ.8ರಂದು ಸಬ್ಬೇನಹಳ್ಳಿಯಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು, ಡಿ.9ರಂದು ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆತನ ತಲೆಗೆ ತೀವ್ರ ಗಾಯವಾಗಿತ್ತು. ಧನ್ಯಕುಮಾರ್ ಚಿಕಿತ್ಸೆಗೆ ಸ್ಪಂದಿಸದಿದ್ದಾಗ ವೈದ್ಯರು ಅವರ ಮೆದುಳು […]

ಮಂಗಳೂರಿನ ಕಾಲೇಜಿನಲ್ಲಿ ಬುರ್ಖಾ ಧರಿಸಿ ನೃತ್ಯ: ನಾಲ್ಕು ವಿದ್ಯಾರ್ಥಿಗಳ ಅಮಾನತು

ಮಂಗಳೂರು: ಇಲ್ಲಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ನಾಲ್ಕು ವಿದ್ಯಾರ್ಥಿಗಳು ಹಿಂದಿ ಸಿನಿಮಾದ ಹಾಡೊಂದಕ್ಕೆ ಬುರ್ಖಾ ಧರಿಸಿ ನೃತ್ಯ ಮಾಡುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಾಲ್ಕು ವಿದ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಮಾಡುವ ವೀಡಿಯೋ ಬಗ್ಗೆ ವಿವಾದವೆದ್ದ ಕೂಡಲೆ ಕಾಲೇಜಿನ ಆಡಳಿತ ಮಂಡಳಿ ನಾಲ್ಕೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ ಆಡಳಿತ ಮಂಡಳಿಯು ಟ್ವೀಟ್ ಮಾಡಿ, ವೀಡಿಯೋದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡುವ ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯದವರೇ ಆಗಿದ್ದು,  […]