ಸುರತ್ಕಲ್ ಟೋಲ್ ಗೇಟ್ ಹೋಯಿತು; ಹೆಜಮಾಡಿಯಲ್ಲಿ ಸುಂಕ ಏರಿತು: ಡಿ.1 ರಿಂದ ಪರಿಷ್ಕೃತ ಶುಲ್ಕ ಜಾರಿ

ಮಂಗಳೂರು: ಸುರತ್ಕಲ್ ಟೋಲ್ ಗೇಟನ್ನು ಎನ್ಎಚ್ 66 ರಲ್ಲಿ ವಿಲೀನಗೊಳಿಸಿದ ನಂತರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನವೆಂಬರ್ 24 ರಂದು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪರಿಷ್ಕೃತ ಬಳಕೆದಾರರ ಶುಲ್ಕ ದರಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಬಳಕೆಯ ಶುಲ್ಕ ದರ ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ಕಾರು, ಜೀಪ್, ವ್ಯಾನ್ ಮುಂತಾದ ಲಘು ಮೋಟಾರು ವಾಹನಗಳಿಗೆ ಸುರತ್ಕಲ್ ಟೋಲ್ ನಲ್ಲಿ ಒಂದು ಟ್ರಿಪ್‌ಗೆ ಪ್ರಸ್ತುತ ಶುಲ್ಕ ರೂ 60 ಮತ್ತು ಹೆಜಮಾಡಿ ಟೋಲ್ ನಲ್ಲಿ […]

ಮಂಗಳೂರು: ನ.26 ರಂದು ಅರೆಹೊಳೆ ಪ್ರತಿಷ್ಠಾನದ ವತಿಯಿಂದ ‘ಸುಖೀಭವ’ ಮಹಿಳಾ ಆರೋಗ್ಯ ಮಾಹಿತಿ ಕಾರ್ಯಕ್ರಮ

ಮಂಗಳೂರು: ಅರೆಹೊಳೆ ಪ್ರತಿಷ್ಠಾನವು ಆಯೋಜಿಸುವ ಸರಣಿ ಮಾಸಿಕ ಕಾರ್ಯಕ್ರಮ “ಬೆಳಕು” ಇದರ ಏಳನೇ ಕಾರ್ಯಕ್ರಮವು ನವೆಂಬರ್ 26 ರಂದು ಶನಿವಾರ ಬೊಂದೆಲ್ ನ ಮುಳಿಯಂಗಣದಲ್ಲಿ ಆಯೋಜಿಸಲಾಗಿದೆ. ಮಹಿಳೆಯರ ಆರೋಗ್ಯದ ಮಾಹಿತಿ ನೀಡುವ ‘ಸುಖೀಭವ’ ಎನ್ನುವ ಕಾರ್ಯಕ್ರಮಕ್ಕೆ ಹರ್ಷ ಡಯಾಗ್ನೋಸ್ಟಿಕ್ ಸರ್ವೀಸಸ್ ನ ನಿರ್ದೇಶಕಿ ಡಾ.ಪ್ರಿಯದರ್ಶಿನಿ ರೈ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನ ನೀಡಲಿದ್ದು ಆಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಅರೆಹೊಳೆ ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: […]

ಮಂಗಳೂರು: ನ. 27 ರಂದು ಗುರು ಬೆಳದಿಂಗಳು ವತಿಯಿಂದ ಬೃಹತ್ ಉಚಿತ ಆರೋಗ್ಯ ಮೇಳ

ಮಂಗಳೂರು: ಗುರುಬೆಳದಿಂಗಳು ಫೌಂಡೇಶನ್‌ ಕುದ್ರೋಳಿ ಆಶ್ರಯದಲ್ಲಿ ಭರವಸೆ ಚಾರಿಟೆಬಲ್ ಫೌಂಡೇಶನ್ ಬೆಂಗಳೂರು ವತಿಯಿಂದ ನ. 27ರಂದು ಬೆಳಗ್ಗೆ 8.30 ರಿಂದ ಸಾಯಂಕಾಲ 4 ರವರೆಗೆ ಮಂಗಳೂರಿನ ಶ್ರೀ ಗೋಕರ್ಣನಾಥ ಕಾಲೇಜು ಸಭಾಂಗಣದಲ್ಲಿ ಪುರುಷ, ಮಕ್ಕಳು ಮತ್ತು ಮಹಿಳೆಯರಿಗಾಗಿ ಬೃಹತ್ ಉಚಿತ ಆರೋಗ್ಯ  ಮೇಳ ಆಯೋಜಿಸಲಾಗಿದೆ. ಮಹಿಳೆಯರ ಮುಟ್ಟಿನ ತೊಂದರೆ, ಬಂಜೆತನ, ಲೈಂಗಿಕ ಸಮಸ್ಯೆ, ರಕ್ತಹೀನತೆ, ಎಚ್ ಪಿ ವಿ ಪರೀಕ್ಷೆ (ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ತಡೆಗಟ್ಟವಿಕೆ, ಎಲ್ಲಾ ಸ್ತ್ರೀ ರೋಗಗಳ ತಡೆಗಟ್ಟುವಿಕೆ, ಮಾರ್ಗದರ್ಶನ ಮತ್ತು ಚಿಕಿತ್ಸೆ […]

ಮಂಗಳೂರು: ನ. 26ರಂದು ಪುರಭವನದಲ್ಲಿ ಉತ್ತರ್-ದಕ್ಷಿಣ್ ಸಂಗೀತ ಕಾರ್ಯಕ್ರಮ

ಮಂಗಳೂರು: ದೇಶದ ನಾನಾ ಪ್ರತಿಷ್ಠಿತ ವೇದಿಕೆಗಳಲ್ಲಿ ಯಶಸ್ವಿಯಾಗಿ ನಡೆದ ಸರಣಿ ಸಂಗೀತಕಾರ್ಯಕ್ರಮ `ಉತ್ತರ್-ದಕ್ಷಿಣ್’ ನ. 26 ಶನಿವಾರದಂದು ಮಂಗಳೂರಿನ ಪುರಭವನದಲ್ಲಿ ಸಂಜೆ 5.30 ರಿಂದ ನಡೆಯಲಿದೆ. ನಗರದ ಪ್ರತಿಷ್ಠಿತ ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ವಿವಿದ್‌ ಆರ್ಟ್ಸ್ ಆ್ಯಂಡ್‌ ಎಂಟರ್‌ಟೈನ್‌ಮೆಂಟ್ ಹಾಗೂ ದಿ ಪಯೋನೀರ್‌ ಆರ್ಟ್ಸ್ ಎಜ್ಯುಕೇಷನ್ ಸೊಸೈಟಿಯು ಪ್ರಸ್ತುತ ಪಡಿಸುತ್ತಿದ್ದು, ದೇಶದ 11 ವೇದಿಕೆಗಳಲ್ಲಿ ಯಶಸ್ವಿಯಾಗಿ ಆಯೋಜಿಸಿದ ಈ ಸರಣಿಯ 12ನೇ ಕಾರ್ಯಕ್ರಮವು ನ. 26ರಂದು ಮಂಗಳೂರಿನಲ್ಲಿ ನಡೆಯಲಿದೆ. ಪ್ರಖ್ಯಾತ ಗಾಯಕಿ […]

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ನಿಗೂಢ ಸ್ಫೋಟ; ಭಯೋತ್ಪಾದಕ ಕೃತ್ಯವೆಂದ ಪೊಲೀಸ್ ಮಹಾನಿರ್ದೇಶಕ

ಮಂಗಳೂರು: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡ ಒಂದು ದಿನದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಭಾನುವಾರ ‘ನಿಗೂಢ ಸ್ಫೋಟ’ ಭಯೋತ್ಪಾದಕ ಕೃತ್ಯವಾಗಿದ್ದು, ಘಟನೆಯ ಕುರಿತು “ಆಳವಾದ ತನಿಖೆ” ನಡೆಯುತ್ತಿದೆ ಎಂದು ಹೇಳಿದ್ದಾರೆ. ಅದು ಈಗ ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಮಾಡಿದ ಭಯೋತ್ಪಾದಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಶನಿವಾರ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡಿದ್ದು, ಬೆಂಕಿ […]