ಮಂಗಳೂರು: ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ

ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಆ. 13 ರಂದು ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಅನ್ನು ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಹಾಗೂ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. […]

ಅವಿಭಜಿತ ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ; ಹೊಂಡ ಗುಂಡಿಯಿಂದ ಅಪಾಯಕ್ಕೆ ಆಹ್ವಾನವೀಯುತ್ತಿದೆ ರಾಷ್ಟ್ರೀಯ ಹೆದ್ದಾರಿ

ಉಡುಪಿ/ ಮಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಉಡುಪಿ ಹಾಗೂ ಮಂಗಳೂರಿನ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದಲ್ಲದೆ, ಅಲ್ಲಲ್ಲಿ, ಮರ-ಮನೆಮಟ್ಟುಗಳು ಉರುಳಿ ಹಲವರು ಪ್ರಾಣ ಕಳೆದುಕೊಂಡ ಘಟನೆಗಳು ವರದಿಯಾಗಿವೆ. ಇದರ ಜೊತೆಗೆ ಧಾರಾಕಾರ ಮಳೆಯಿಂದಾಗಿ ಮುಲ್ಕಿ-ಮಂಗಳೂರು ಹಾಗೂ ನಂತೂರು-ಬಿ.ಸಿ ರೋಡು ರಾ.ಹೆದ್ದಾರಿಯಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿದ್ದು ಅಪಾಯಕ್ಕೆ ಆಹ್ವಾನವೀಯುತ್ತಿದೆ. ಕುಂದಾಪುರ-ಉಡುಪಿ-ಮುಲ್ಕಿ ಮಾರ್ಗವಾಗಿ ಹಲವಾರು ವಾಹನಗಳು ಮಂಗಳೂರಿಗೆ ಪ್ರಯಾಣಿಸುತ್ತವೆ. ನಿತ್ಯ ಸಂಚಾರ ನಡೆಸುವ ಈ ವಾಹನಗಳು ರಾ.ಹೆದ್ದಾರಿಯ ಹೊಂಡ ಗುಂಡಿಗಳನ್ನು ತಪ್ಪಿಸಿಕೊಂಡು ಚಲಿಸಬೇಕಾದ ಪರಿಸ್ಥಿತಿ […]

ಮುಂಗಾರು ಋತುವಿನ ಎಫೆಕ್ಟು: ಕರಾವಳಿಯಲ್ಲಿ ಮೀನಿನ ದರ ದುಪ್ಪಟ್ಟು!!

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆಯ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಹಾಗೂ ಎರಡು ತಿಂಗಳುಗಳವರೆಗೆ ಮೀನುಗಾರಿಕೆಗೆ ನಿಷೇಧ ಹೇರಿರುವುದರಿಂದ ನಿರೀಕ್ಷೆಯಂತೆಯೆ ಮೀನಿನ ದರ ದುಪ್ಪಟ್ಟಾಗಿದೆ. ನಗರದ ಕೆಎಫ್‌ಡಿಸಿ ಯಲ್ಲಿ ಒಂದು ಕೆಜಿ ಬೊಳೆಂಜಿರ್ 1,600 ರೂ, ಅಂಜಲ್ ಮೀನು ಪ್ರತಿ ಕೆಜಿಗೆ 1300 ರೂಗೆ ಮಾರಾಟವಾಗಿದೆ. ಕೇವಲ 12 ದಿನಗಳ ಹಿಂದೆ ಈ ಮೀನುಗಳ ದರ ಈಗಿನ ದರದ ಅರ್ಧದಷ್ಟಿತ್ತು. ದೊಡ್ಡ ಸಿಗಡಿ ಕೆಜಿಗೆ 475 ರೂ ಹಾಗೂ ಬೂತಾಯಿ-ಬಂಗುಡೆ ಮೀನುಗಳು ಕ್ರಮವಾಗಿ ಪ್ರತಿ ಕೆಜಿಗೆ 250 ರೂ ಮತ್ತು […]

ಮಂಗಳೂರು: ವಾಮಂಜೂರಿನಲ್ಲಿ ಅಣಬೆ ಕಾರ್ಖಾನೆ ವಿರುದ್ದ ಸಾರ್ವಜನಿಕರಿಂದ ಧರಣಿ

ಮಂಗಳೂರು: ನಗರದ ಹೊರವಲಯದಲ್ಲಿರುವ ವಾಮಂಜೂರು ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಣಬೆ ಕಾರ್ಖಾನೆಯಿಂದ ಆರೋಗ್ಯ ಹಾನಿಯಾಗುತ್ತಿರುವ ವಿರುದ್ದ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಗುರುವಾರದಂದು ಇಲ್ಲಿನ ವ್ಯಾಪಾರಿಗಳು ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಿ, ಪ್ರತಿಭಟನೆ ನಡೆಸುತ್ತಿರುವ ನಿವಾಸಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಅಣಬೆ ಕಾರ್ಖಾನೆಯನ್ನು ಮುಚ್ಚುವಂತೆ ಒತ್ತಾಯಿಸಿ ನಿವಾಸಿಗಳು ಸ್ಥಳೀಯ ಗ್ರಾಮಸ್ಥ ರಿಯಾಜ್ ಅಹಮದ್ ಅವರೊಂದಿಗೆ ಅನಿರ್ದಿಷ್ಟಾವಧಿ ಧರಣಿ ಕುಳಿತಿದ್ದು, ಸುಮಾರು 190 ಮನೆಗಳಿರುವ ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಖಾನೆಯೊಳಗೆ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದ್ದು, ಅಣಬೆ ಕಟಾವು […]

ಕರಾವಳಿಯಲ್ಲಿ ಮುಂದಿನ ಎರಡು ತಿಂಗಳು ಮೀನುಗಾರಿಕೆ ನಿಷೇಧ: ಏರಲಿದೆ ಮೀನಿನ ದರ?

ಉಡುಪಿ/ಮಂಗಳೂರು: ಮೀನು ಪ್ರಿಯರಿಗೆ ಅಪ್ರಿಯವಾದ ಸುದ್ದಿ ಇದು. ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕಾ ಋತು ಮುಕ್ತಾಯವಾಗಿದ್ದು, ಉಭಯ ಜಿಲ್ಲೆಗಳಲ್ಲಿಯೂ ಜೂ.1ರಿಂದ ಜು.31ರ ವರೆಗೆ ಆಳಸಮುದ್ರ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಮೀನಿನ ಪೂರೈಕೆಯಲ್ಲಿ ವ್ಯತ್ಯಾಸಗಳಾಗುವುದರಿಂದ ಮೀನಿನ ದರ ಗಗನಕ್ಕೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹೀಗಾದಲ್ಲಿ ಮೀನು ಖರೀದಿಸುವುದು ಕಷ್ಟವಾಗಿದ್ದು, ಮೀನು ಪ್ರಿಯರಿಗೆ ನಿರಾಶೆಯಾಗಲಿದೆ. ಮೀನುಗಾರಿಕಾ ಅವಧಿ ಮುಗಿದಿರುವುದರಿಂದ ಇನ್ನು ಆಗಸ್ಟ್ ತಿಂಗಳವರೆಗೂ ಕಾಯಬೇಕಾಗುತ್ತದೆ. ಆಳ ಸಮುದ್ರದ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳು ರಜಾ ಅವಧಿಯಾಗಿದ್ದು ಈ ಅವಧಿಯಲ್ಲಿ ಮೀನುಗಾರಿಕೆಯನ್ನು […]