1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]
ಮುರ್ಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ” ಖ್ಯಾತಿಯ ಜೆಪಿ ತುಮ್ಮಿನಾಡು

ಮಂಗಳೂರು: ತುಳು ಚಿತ್ರರಂಗದ ಖ್ಯಾತ ಕಲಾವಿದ, ಹಾಗೇ ಇತ್ತೀಚೆಗೆ ಫುಲ್ ಹಿಟ್ ಆದ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಂ ಸೋ” ಚಿತ್ರದ ನಟ, ನಿರ್ದೇಶಕ ಜೆಪಿ ತುಮ್ಮಿನಾಡು ಅವರು ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮೇ 6ರಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದಲ್ಲಿ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಕುಟುಂಬ ಸದಸ್ಯರು, ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದ ಮದುವೆ ಶಾಸ್ತ್ರಗಳು ನಡೆದಿದ್ದು, ಮಾಂಗಲ್ಯಧಾರಣೆಯ ಫೋಟೋಗಳು ಮತ್ತು ವಿಡಿಯೋಗಳು […]
ವೆನ್ ಲಾಕ್ ಆಸ್ಪತ್ರೆಯಲ್ಲಿ ಶಾಖಾಘಾತ ಚಿಕಿತ್ಸೆಗೆ ವಿಶೇಷ 10 ಹಾಸಿಗೆಗಳ ಘಟಕ

ಮಂಗಳೂರು: ಕರಾವಳಿಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ಪರಿಣಾಮವಾಗಿ ಶಾಖಾಘಾತ (Heat Stroke) ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್ನ 5ನೇ ಮಹಡಿಯಲ್ಲಿ ಶಾಖಾಘಾತ ರೋಗಿಗಳ ಚಿಕಿತ್ಸೆಗೆ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದ್ದಾರೆ. ಶಾಖಾಘಾತ ಎಂದರೇನು? ಶಾಖಾಘಾತವು ಜೀವಕ್ಕೆ ಅಪಾಯಕಾರಿ ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ದೇಹದ ಉಷ್ಣತೆ 104°F (40°C) ಅಥವಾ ಅದಕ್ಕಿಂತ ಹೆಚ್ಚು ಏರಿದಾಗ ದೇಹದ ತಾಪಮಾನ ನಿಯಂತ್ರಣ ವ್ಯವಸ್ಥೆ ವಿಫಲವಾಗುತ್ತದೆ. ತಕ್ಷಣ […]
ಮುಂಗಾರು ಮಳೆಗೆ ಮಂಗಳೂರು ರೆಡಿ; ಎಲ್ಲಾ ತುರ್ತು ಸೇವೆಗಳನ್ನು ನಿಭಾಯಿಸಲು ಸಿದ್ದವಾದ ಜಿಲ್ಲಾಡಳಿತ

ಮಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ, ಭಾರೀ ಮಳೆಯಿಂದ ಸಂಭವಿಸಬಹುದಾದ ಹಾನಿಯನ್ನು ತಡೆಯಲು ಮಂಗಳೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಈ ಬಾರಿ ವಿಕೇಂದ್ರೀಕೃತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ರೂ. 30,000 ಅನುದಾನವನ್ನು ಮೀಸಲಿಡಲಾಗಿದೆ. ಭೂಕುಸಿತ, ಮನೆಗಳಿಗೆ ನೀರು ನುಗ್ಗುವುದು, ಮರಗಳು […]