ತ್ರಿಶಾ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಮಂಗಳೂರು: ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ನ ಪ್ರಥಮ ಬಿ.ಕಾಂ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಲೆಕ್ಕ ಪರಿಶೋಧಕ ಗೋಪಾಲಕೃಷ್ಣ ಭಟ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಎಂಬುದು ವಿದ್ಯಾರ್ಥಿಯಲ್ಲಿನ ಅಂತಃ ಶಕ್ತಿಯನ್ನು ಹೊರ ತರುವ ಸಾಧನವಾಗಿದೆ. ಪರಿಶ್ರಮದ ಮೂಲಕ ಮಾತ್ರ ಸಾಧನೆ ಎನ್ನುವುದು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜಿನ ಶೈಕ್ಷಣಿಕ ಆಡಳಿತ ಸಲಹೆಗಾರ ನಾರಾಯಣ್ […]

ಪ್ರತಿಭಾ ಕುಳಾಯಿ ಮಾನಹಾನಿಕರ ಪೋಸ್ಟ್ ಪ್ರಕರಣ: ಎರಡನೇ ಆರೋಪಿ ನ್ಯಾಯಾಲಯಕ್ಕೆ ಹಾಜರ್

ಮಂಗಳೂರು: ಕಾಂಗ್ರೆಸ್ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್.ಶೆಟ್ಟಿ ಗುರುವಾರದಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ನ್ಯಾಯಾಲಯಕ್ಕೆ ಹಾಜರಾಗಿರುವ ಆತನನ್ನು ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಶೆಟ್ಟಿ ಪೋಸ್ಟ್ ಮಾಡಿದ ಪೋಸ್ಟ್ ಗೆ ಶ್ಯಾಮ್ ಸುದರ್ಶನ್ ಭಟ್ ಎನ್ನುವವರು ಅಸಭ್ಯ ಟಿಪ್ಪಣಿಯನ್ನು ಬರೆದಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ […]

ತ್ರಿಶಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಹಾಗೂ ವೈ.ಆರ್. ಸಿ. ಸ್ವಯಂಸೇವಕರಿಗೆ ಮಾಹಿತಿ ಕಾರ್ಯಗಾರ

ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಮತ್ತು ಯೂತ್ ರೆಡ್ ಕ್ರಾಸ್ (ವೈ.ಆರ್.ಸಿ.) ಘಟಕಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಸ್ವಯಂ ಸೇವಕರಿಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ಕಾಲೇಜು ಮಂಗಳೂರಿನ ಕಾರ್ಯತಂತ್ರ ಯೋಜನಾ ವಿಭಾಗದ ಮುಖ್ಯಸ್ಥ ರಮೇಶ್ ಕೆ.ಜಿ., ವ್ಯಕ್ತಿಯೊಬ್ಬನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಎನ್.ಎಸ್.ಎಸ್ ಮತ್ತು ವೈ.ಆರ್.ಸಿ. ಗಳ ಪಾತ್ರ ಬಹಳ ಮಹತ್ವದ್ದಾಗಿದೆ. […]

ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಪ್ರಸನ್ನಕುಮಾರ್ ಅವರಿಗೆ ಪಿ.ಎಚ್.ಡಿ.

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಪ್ರಸನ್ನಕುಮಾರ್ ಆರ್ ಇವರು ಸಲ್ಲಿಸಿದ “ಸ್ಟಡಿ ಆಫ್ ಸ್ಟ್ರಕ್ಚರಲ್, ಆಪ್ಟಿಕಲ್‌ ಆ್ಯಂಡ್ ಮ್ಯಾಗ್ನೆಟಿಕ್ ಪ್ರೋಪರ್ಟೀಸ್‌ ಆಫ್‌ ಎಮ್‌ ಎನ್ ಕೊ ಆ್ಯಂಡ್‌ ಡಿವೈಡೊಪ್ಡ್ ಬಿಸ್ಮತ್ ಫೆರೈಟ್‌ಥಿನ್‌ಫಿಲ್ಮ್ಸ್” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿಯನ್ನುನೀಡಿ ಗೌರವಿಸಿದೆ. ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಗೋಪಾಲಕೃಷ್ಣ ನಾಯಕ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಇವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ರಾಮಶೆಟ್ಟಿ ಮತ್ತು ನಾಗಮ್ಮ ದಂಪತಿಗಳ ಪುತ್ರರಾಗಿದ್ದಾ

ಉಡುಪಿ-ಮಂಗಳೂರು ಲಯನ್ಸ್ ಕ್ಲಬ್ ಗಳ ಸಮಾಗಮ

ಉಡುಪಿ: ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಉಡುಪಿ ಮತ್ತು ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮಂಗಳೂರು ಈ ಎರಡು ಕ್ಲಬ್ ಗಳ ಸಮಾಗಮವು ಇತ್ತೀಚಿಗೆ ಉಡುಪಿಯ ಬಲೈಪಾದೆ ನಿತ್ಯಾನಂದ ಆರ್ಕೇಡ್ ಕಾಂಪ್ಲೆಕ್ಸ್ ಉದ್ಯಾವರ ಇಲ್ಲಿ ನೆರವೇರಿತು. ಜಿಲ್ಲಾ 317ಸಿಯ ಪ್ರಥಮ ಉಪ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನೆಲಿಯೋ ಮುಖ್ಯ ಅತಿಥಿಯಾಗಿ ಮಾತನಾಡಿ, ಈ ರೀತಿಯ ಸಂಗಮ ಎರಡು ಜಿಲ್ಲೆಗಳ ಲಯನ್ ಸದಸ್ಯರು ಸಮಾಜಕ್ಕೆ ಇನ್ನೂ ಹೆಚ್ಚಿನ ಅಗತ್ಯ ಸೇವೆಗಳನ್ನು ಮಾಡುವ ಬಗ್ಗೆ ಮತ್ತು ಕ್ಲಬ್ ಗಳ ಮಧ್ಯೆ […]