ಮಂಗಳೂರಿನ ರಸ್ತೆಯಲ್ಲಿ ಮೋದಿ… ಮೋದಿ… ಪಠಣ.. ಹರಿದು ಬಂದ ಜನಸಾಗರ

ಮಂಗಳೂರು: ನಿರೀಕ್ಷೆಯಂತೆಯೆ ಮಂಗಳೂರಿನ ಜನತೆ ಈ ಬಾರಿಯೂ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪ್ರಧಾನಿ ಮೋದಿಗೆ ಮೋದಿ ಪಠಣದ ಸ್ವಾಗತ ಕೋರಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಗೆ ಹೋಗುವ ರಸ್ತೆಗಳಲ್ಲಿ ಬಿಸಿಲನ್ನೂ ಲೆಕ್ಕಿಸದೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಹಿಂದಿನ ಬಾರಿಯೂ ಮೋದಿಯವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಇದೇ ರೀತಿ ಜನಸಾಗರ ಹರಿದು ಬಂದಿತ್ತು, ಮತ್ತು ಇದನ್ನು ಮೋದಿ ಅವರು ತಮ್ಮ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ […]
ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೊಚ್ಚಿಯ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿಸ್ವದೇಶಿ ವಿನ್ಯಾಸ ಮತ್ತು ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಗೆ ಚಾಲನೆ ನೀಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಕಚೇರಿಯಿಂದ ವಿನ್ಯಾಸಗೊಳಿಸಲ್ಪಟ್ಟಿರುವ ಮತ್ತು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಿಂದ ನಿರ್ಮಿಸಲ್ಪಟ್ಟಿರುವ ಐ.ಎನ್.ಎಸ್ ವಿಕ್ರಾಂತ್ ಅನ್ನು ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲಾಗಿದೆ ಮತ್ತು ಇದು ಭಾರತದ ಕಡಲ ಇತಿಹಾಸದಲ್ಲಿ ಇದುವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗಾಗಿದೆ. ವಿಕ್ರಾಂತ್ ಕಾರ್ಯಾರಂಭದೊಂದಿಗೆ, ಭಾರತವು ಎರಡು ಕಾರ್ಯಾಚರಣೆಯ […]
ಪ್ರಧಾನಿ ಮೋದಿ ಮಂಗಳೂರು ಭೇಟಿ: ಕ.ರಾ.ರ.ಸಾ.ನಿಗಮದ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆ ಬಸ್ ಗಳ […]
ಮಂಗಳೂರು: “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನಕ್ಕೆ ಚಾಲನೆ

ಮಂಗಳೂರು: ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರ್ ಕುಡ್ಲ ತುಳು ಸಂಘಟನೆ, ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ಸೆಪ್ಟೆಂಬರ್ 1 ಗುರುವಾರದಂದು ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ ಬಂಜಾರು ಮಲೆ ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಅಭಿಯಾನವು 1 ಲಕ್ಷಕ್ಕೂ ಅಧಿಕ […]
ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್: ನಾಯಕತ್ವದಲ್ಲಿ ಮಹಿಳೆಯರು ಕುರಿತು ಉಪನ್ಯಾಸ ಕಾರ್ಯಕ್ರಮ

ಮಂಗಳೂರು: ಇಲ್ಲಿನ ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನಲ್ಲಿ “ನಾಯಕತ್ವದಲ್ಲಿ ಮಹಿಳೆಯರು – ಅಡೆತಡೆಗಳು ಮತ್ತು ಪಕ್ಷಪಾತವನ್ನು ನಿವಾರಿಸುವುದು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಶ್ರೀಮತಿ ಶಾಂಭವಿ ಭಂಡಾರ್ಕರ್ ಮಹಿಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 250ಕ್ಕೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಶ್ರೀಮತಿ ಪ್ರತಿಜ್ಞಾ ಸುಹಾಸಿನಿ, ಉಪಪ್ರಾಂಶುಪಾಲೆ ಶ್ರೀಮತಿ ಗೀತಾಲಕ್ಷ್ಮಿ ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.