ಜೆಇಇ ಮೈನ್ಸ್ ಪರೀಕ್ಷೆ: ಎಕ್ಸ್ ಪರ್ಟ್ ಪಿಯು ಕಾಲೇಜಿನ 70 ವಿದ್ಯಾರ್ಥಿಗಳಿಗೆ 95 ಪರ್ಸೆಂಟೈಲ್‌ ಗಿಂತ ಅಧಿಕ ಅಂಕ

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ವಳಚ್ಚಿಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್‌ಬೈಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ 70 ವಿದ್ಯಾರ್ಥಿಗಳು 95 ಪರ್ಸೆಂಟೈಲ್‌ಗಿಂತ ಅಧಿಕ ಹಾಗೂ 146 ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. 6 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ, 20 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಅಧಿಕ, 39 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಅಧಿಕ, 56 ವಿದ್ಯಾರ್ಥಿಗಳು 96 […]

ಮಂಗಳೂರು: ಎಲ್.ಐ.ಸಿ ಮಂಗಳೂರು ಶಾಖೆಯ ಅಭಿವೃದ್ಧಿಅಧಿಕಾರಿ ಜಗದೀಶ್.ವಿ.ಗೋಳಿ ಬೀಳ್ಕೊಡುಗೆ ಕಾರ್ಯಕ್ರಮ

ಮಂಗಳೂರು: ಎಲ್.ಐ.ಸಿ ವತಿಯಿಂದ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಐ.ಸಿ ಮಂಗಳೂರು ಪ್ರಥಮ ಶಾಖೆಯ ಅಭಿವೃದ್ಧಿ ಅಧಿಕಾರಿ ಜಗದೀಶ್ ವಿ ಗೋಳಿ ಅವರನ್ನು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಶಾಖೆಯ ಹಿರಿಯ ಪ್ರಬಂಧಕ ತುಳಸೀದಾಸ್ ವಿ.ಪವಸ್ಕರ್‌ ಮಾತನಾಡಿ, ಜೀವವಿಮಾ ನಿಗಮದ ಬೆಳವಣಿಗೆಯಲ್ಲಿ ಜಗದೀಶ್‌ ಅವರ ಕೊಡಗೆ ಅಪಾರ ಎಂದು ಸ್ಮರಿಸಿದರು. ಈ ಸಂದರ್ಭದಲ್ಲಿ ಜಗದೀಶ್.ವಿ.ಗೋಳಿ ದಂಪತಿ ಮತ್ತು ಮಕ್ಕಳನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡುವ ಮೂಲಕ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್.ವಿ.ಗೋಳಿ, “ಸಂಸ್ಥೆಯಿಂದ ನಾನು ಬಹಳಷ್ಟು ಅನುಭವಗಳನ್ನು ಪಡೆದುಕೊಂಡಿದ್ದೇನೆ. […]

ಮಂಗಳೂರು: ದ್ವಿಚಕ್ರ ವಾಹನದ ಹಿಂಬದಿ ಪುರುಷ ಸವಾರರ ನಿರ್ಬಂಧ ವಾಪಸ್; ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಪೊಲೀಸ್ ಇಲಾಖೆ

ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆಯಿಂದ ಬೈಕ್​ನಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧಿಸಿದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್​​ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದ ಬಳಿಕ ಜಾರಿಯಲ್ಲಿದ್ದ ರಾತ್ರಿ ನಿಷೇಧಾಜ್ಞೆಯು ಕೂಡಾ ನಾಳೆ ಬೆಳಿಗ್ಗೆ ತೆರವಾಗಲಿದೆ. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ಸಭೆಯ ಬಳಿಕ ರಾತ್ರಿ ಕರ್ಫ್ಯೂ ಸಡಿಲಿಕೆ ಬಳಿಕ ಬೈಕ್​​ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರಂತೆ ಸಂಜೆ 4 […]

ಮಂಗಳೂರು: ವಯಸ್ಕ ಪುರುಷರ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇರುವುದಿಲ್ಲ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಸವಾರಿ ಮಾಡಲು ಅವಕಾಶ ಇರುತ್ತದೆ. ಹಿಂಬದಿ ಸವಾರರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಇಂಥ ಆದೇಶ ಈಗಾಗಲೇ ಜಾರಿಯಾಗಿದ್ದು, ಅದೇ ರೀತಿ ಇಲ್ಲಿಯೂ ಜಾರಿಗೊಳಿಸುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಯಾವುದೇ ಪುರುಷರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ ಆದರೆ ಇಲ್ಲಿ ಎಲ್ಲಾ […]

ಮಂಗಳೂರಿನ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವ

ಮಂಗಳೂರು: ಇಲ್ಲಿನ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಬುಧವಾರ ಬೆಳಗ್ಗೆ 10.15 ರ ಸುಮಾರಿಗೆ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ಸಾರ್ವಜನಿಕರು ಕಟ್ಟಡಗಳಿಂದ ಹೊರಗೋಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಸ್ವಲ್ಪ ಸಮಯದ ಬಳಿಕ ಪಾಠ ಪ್ರವಚನಗಳನ್ನು ಪುನರಾರಂಭಿಸಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯರು ಭೂಕಂಪನದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಕಳೆದ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ ಅಥವಾ ಸಮೀಪದಲ್ಲಿ ಯಾವುದೇ ಗಮನಾರ್ಹ ಭೂಕಂಪಗಳು ಸಂಭವಿಸಿಲ್ಲ. ಹಾಗಿದ್ದರೂ […]