ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮೂಡುಬಿದ್ರೆ ಸಮೀಪದ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರು-ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬಂದಾಗ ಕೆಳಗೆ ಉರುಳಿ ಬಿದ್ದು ಅಫಘಾತಕ್ಕೀಡಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಆಗಸ್ಟ್ 5ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು: ದ.ಕ ವ್ಯಾಪ್ತಿಯಲ್ಲಿ ಬೆನ್ನು ಬೆನ್ನಿಗೆ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ, ಕರಾವಳಿ ಜಿಲ್ಲೆಯು ಕುದಿಯುವ ಬಾಣಲೆಯಂತಾಗಿದ್ದು, ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಮಂಗಳೂರು ನಗರ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಆಗಸ್ಟ್ 1 ರವರೆಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5ರ ಸಂಜೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಿಷೇಧಾಜ್ಞೆ ಸಂದರ್ಭದಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವಂತಿಲ್ಲ. ಚೇಷ್ಟೆ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಕ್ರಿಯೆಯನ್ನು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ. ನಿಷೇಧಿತ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ […]
ಉಡುಪಿ ರಾಷ್ಟ್ರೀಯ ಹೆದ್ದಾರಿಗಳು ಮಾಯ! ಹೊಂಡದಲ್ಲಿ ರಸ್ತೆಯೋ ರಸ್ತೆಯಲ್ಲಿ ಹೊಂಡವೋ? ಪ್ರಯಾಣಿಕರಲ್ಲಿ ಗಲಿಬಿಲಿ!

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗ ಸಂಪೂರ್ಣ ಹೊಂಡಗಳದ್ದೇ ಕಾರುಬಾರು. ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗಿರುವ ಹೆದ್ದಾರಿಗಳು ಮರಣ ಮೃದಂಗ ಬಾರಿಸುತ್ತಿವೆ. ಹೆದ್ದಾರಿಗಳಲ್ಲಿ ನಿರ್ಮಾಣವಾಗಿರುವ ಆಳತ್ತೆರದ ಗುಂಡಿಯಲ್ಲಿ ಬಿದ್ದು, ಪ್ರಾಣ ಕಳೆದುಕೊಂಡ, ಕೈ ಕಾಲು ಮುರಿದುಕೊಂಡ ಘಟನೆಗಳು ಹಲವಾರು ನಡೆದಿವೆ. ಸುರತ್ಕಲ್ -ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಚಿಂತಾಜನಕವಾಗಿದೆ. ಇಲ್ಲಿ ರಸ್ತೆಯಲ್ಲಿ ಗುಂಡಿಯೋ, ಗುಂಡಿಯೊಳಗೆ ರಸ್ತೆಯೋ ಎಂದು ಪ್ರಯಾಣಿಕರು ಗಲಿಬಿಲಿಗೊಂಡು ಪ್ರಾಣ ಕೈಯಲ್ಲಿ […]
ಶಿರಾಡಿ ಘಾಟ್ ನಲ್ಲಿ ಏಕಮುಖ ಸಂಚಾರ: ಬೆಂಗಳೂರು ಕಡೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗದ ವ್ಯವಸ್ಥೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳಿಗೆ ಶಿರಾಡಿ ಘಾಟ್ ಅನ್ನು ಏಕಮುಖ ಮಾರ್ಗವನ್ನಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಮಾರ್ಗವು ಶಿರಾಡಿ ಘಾಟ್ ಮೂಲಕ ಯಥಾವತ್ ಮುಂದುವರಿದರೆ, ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ದೋಣಿಗಲ್ ಬಳಿಯ ಕಪ್ಪಳ್ಳಿ-ಕೆಸಗಾನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸಬೇಕು. ಇದು 2-ಕಿಮೀ ಉದ್ದದ ಮಾರ್ಗವಾಗಿದ್ದು ತಾತ್ಕಾಲಿಕ ಕ್ರಮದ ಭಾಗವಾಗಿ ಪರ್ಯಾಯ ಮಾರ್ಗವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನು 5 ರಿಂದ 6 ದಿನಗಳಲ್ಲಿ ರಸ್ತೆ ಸಿದ್ಧವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸಿ […]
ಭೂಕುಸಿತದ ಭೀತಿ ಹಿನ್ನೆಲೆ: ಮಂಗಳೂರು-ಮಡಿಕೇರಿ ಪರ್ಯಾಯ ಮಾರ್ಗವೂ ಬಂದ್

ಮಡಿಕೇರಿ: ಮಂಗಳೂರು-ಬೆಂಗಳೂರು ರಾ.ಹೆ 75 ರಲ್ಲಿ ಶಿರಾಡಿ ಘಾಟ್ ಸಮೀಪ ಭೂಕುಸಿತ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೀಗ ಪರ್ಯಾಯ ಮಾರ್ಗದಲ್ಲೂ ಭೂಕುಸಿತ ಭೀತಿಯ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಭಾನುವಾರದಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಡೆಗೋಡೆಯ ಸ್ಲ್ಯಾಬ್ ಗಳು ಹೊರಚಾಚಿದ್ದರಿಂದ ಮಾಣಿ-ಮೈಸೂರು ಮಾರ್ಗದಲ್ಲಿ ರಸ್ತೆ ಸಂಚಾರ ನಿಷೇಧಿಸಿ ಮಡಿಕೇರಿ-ಮೇಕೇರಿ-ಅಪ್ಪಂಗಳ-ತಾಳತ್ತಮನೆ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈಗ ಈ ಮಾರ್ಗದಲ್ಲೂ […]