ಮಂಗಳೂರು:“ಎಜುಪಾತ್ ಸರಣಿ ಉಪನ್ಯಾಸ – 2025 -ವೃತ್ತಿಯಾಗಿ ವಾಸ್ತುಶಿಲ್ಪ”

ಮಂಗಳೂರು:ವಾಸ್ತುಶಿಲ್ಪ ಎಂಬುದು ಕಲೆ, ವಿಜ್ಞಾನ, ಮತ್ತು ತಂತ್ರಜ್ಞಾನವನ್ನು ಸಂಯೋಜಿಸುವ ವೃತ್ತಿಯಾಗಿದ್ದು ಸೃಜನಾತ್ಮಕ, ತಾಂತ್ರಿಕಜ್ಞಾನ ಹಾಗೂ ಕಾರ್ಯಕ್ಷಮತೆಯ ಮಿಶ್ರಣವಾಗಿದೆ ಎಂದು ಸಂಪನ್ಮೂಲ ವ್ಯಕ್ತಿಗಳಾಗಿ ಕೀಸ್ಟೋನ್ ಅರ್ಕಿಟೆಕ್ಚರ್ನ ಶ್ರೀಮತಿ ದೀಪಿಕಾ ಎ.ನಾಯಕ್ ಅವರು ಹೇಳಿದರು. ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್ಬೈಲ್ನಲ್ಲಿ ‘ವೃತ್ತಿಯಾಗಿ ವಾಸ್ತುಶಿಲ್ಪ’ ಎಂಬ ವಿಷಯದ ಕುರಿತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ವಾಸ್ತುಶಿಲ್ಪ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೀಸ್ಟೋನ್ ಅರ್ಕಿಟೆಕ್ಚರ್ನ ದೀಪಿಕಾ ಎ […]