ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ಟ್ವಿಸ್ಟ್; ಮಂಗಳೂರಿನ ಕಾಲೇಜಿಗೆ ಸೇರಲು ಕಿಡ್ನಾಪ್ ಕಥೆ ಕಟ್ಟಿದ ವಿದ್ಯಾರ್ಥಿನಿ.!

ಮಂಗಳೂರು: ಮಂಗಳೂರಿನ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿನಿಯೊಬ್ಬರು ಅಪಹರಣ ಕಥೆ ಕಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ. ಯುವತಿ ಬ್ಲೇಡ್ನಲ್ಲಿ ಸಣ್ಣದಾಗಿ ಕೈ ಕೊಯ್ದುಕೊಂಡು ಕಿಡ್ನ್ಯಾಪ್ ನಾಟಕವಾಡಿದ್ದಳು. ಕಿಡ್ನ್ಯಾಪ್ ಡ್ರಾಮಾ ಮಾಡಿದರೆ ಮನೆಯವರು ಮಂಗಳೂರಿನ ಪಿಯುಸಿ ಕಾಲೇಜಿಗೆ ಸೇರಿಸುತ್ತಾರೆ ಅನ್ನೋ ಪ್ಲ್ಯಾನ್ ಮಾಡಿದ್ದಳು. ನಿನ್ನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಯತ್ನ ಪ್ರಕರಣ ದಾಖಲಾಗಿತ್ತು. ಇಡೀ ದಿನ ಪೊಲೀಸರ ತಂಡದಿಂದ ಕಾರ್ಯಾಚರಣೆ ನಡೆಸಲಾಯಿತು. ಬ್ಯಾಗ್ನಲ್ಲಿರೋ ಪುಸ್ತಕಗಳನ್ನು ವಿದ್ಯಾರ್ಥಿನಿ ಮನೆಯಲ್ಲೇ ಸುಟ್ಟು ಹಾಕಿದ್ದಳು. ಬಳಿಕ […]