ಮಂಗಳೂರಿನಲ್ಲಿ ಆ.3 ರಂದು “ಕುಂದಾಪ್ರ ಕನ್ನಡ ಹಬ್ಬ”

ಕುಂದಗನ್ನಡದ ನೆಲದಲ್ಲಿ ಹುಟ್ಟಿ, ಬದುಕಿಗೊಂದು ನೆಲೆಯರಸಿ ಮಂಗಳೂರಿಗೆ ಬಂದು ಸೇರಿ, ಇಲ್ಲಿಯವರಾದವರೆಲ್ಲರೂ ಸೇರಿ, ತಮ್ಮ ಮೂಲ ಸಂಸ್ಕೃತಿ, ಭಾಷೆ, ಆಚರಣೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ “ಕುಡ್ಲದಗಿಪ್ಪ ಕುಂದಾಪ್ರದರ್” ಎಂಬ ವಾಟ್ಸಾಪ್ ಬಳಗವನ್ನು ರಚಿಸಿಕೊಂಡಿದ್ದಾರೆ. ಈಗ ಈ ವಾಟ್ಸಾಪ್ ಬಳಗದ ಸದಸ್ಯರ ಸಂಖ್ಯೆ 650ನ್ನು ಮೀರಿದೆ.ಈ ವಾಟ್ಸಾಪ್ ಬಳಗದ ಸದಸ್ಯರೆಲ್ಲರೂ ಸೇರಿ , ಕಳೆದ ಐದು ವರ್ಷಗಳಿಂದ, ಆಷಾಢ ಮಾಸದ ಒಂದು ದಿನದಂದು “ಕುಂದಾಪ್ರ ಕನ್ನಡ ಹಬ್ಬ” ಆಚರಿಸುತ್ತಾ ಬಂದಿದ್ದಾರೆ.ಪ್ರತಿವರ್ಷದಂತೆ, ಈ ವರ್ಷವೂ ” ಕುಂದಾಪ್ರ […]