ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಹರಿದ ಲಾರಿ: ಉಡುಪಿ ಪರ್ಕಳ ಮೂಲದ ಮಹಿಳೆ ಮೃತ್ಯು.!

ಮಂಗಳೂರು: ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಉಡುಪಿ ಪರ್ಕಳ ಮೂಲದ ಮಹಿಳೆಯೊಬ್ಬರು ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ. ಮೃತಪಟ್ಟ ಮಹಿಳೆ ಉಡುಪಿಯ ಪರ್ಕಳ ಮೂಲದ ಮಾಧವಿ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ […]