ಮಣಿಪಾಲ: ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶವವಾಗಿ ಪತ್ತೆ; ಚಿರತೆ ದಾಳಿ ನಡೆಸಿರುವ ಶಂಕೆ.!

ಉಡುಪಿ: ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ಗುರುವಾರ ಸಂಜೆ ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಇಂದು ಬೆಳ್ಳಿಗ್ಗೆ ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ‌. ಅವರ ಮೃತದೇಹ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಸರಳೇಬೆಟ್ಟುವಿನ ನೆಹರು ನಗರ ನಿವಾಸಿ ಪುಷ್ಪಾ ನಾಯ್ಕ್ (66) ಎಂದು ಗುರುತಿಸಲಾಗಿದೆ. ಇವರು‌ ನಿನ್ನೆ ಸಂಜೆ ಹಸುಗಳಿಗೆ ಹುಲ್ಲು ತರಲು ಮನೆಯ ಎದುರಿನ ಗುಡ್ಡಕ್ಕೆ ತೆರಳಿದ್ದರು. ಬಳಿಕ ಎಷ್ಟೇ ಹೊತ್ತಾದರೂ ಮನೆಗೆ ವಾಪಾಸು […]