ಮಣಿಪಾಲ: 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮಣಿಪಾಲ: ಮಣಿಪಾಲ- 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆಯು ಸುಮಾರು 8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿದ್ದು ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಹಾಗೂ ಲೋಕೋಪಯೋಗಿ […]

ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ- ಎಂಡೋಸ್ಕೋಪಿಕ್ ಸರ್ಜರಿ ಕಾರ್ಯಾಗಾರ

ಮಣಿಪಾಲ: ಕೆ.ಎಂ.ಸಿ ಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗವು ಸೆ. 2 ಮತ್ತು 3 ರಂದು ಎಂಡೋಸ್ಕೋಪಿಕ್ ಸರ್ಜರಿ-ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸುಧಾರಿತ ಎಂಡೋಸ್ಕೋಪಿಕ್ ಕಾರ್ಯವಿಧಾನಕ್ಕಾಗಿ ಮೊದಲ ತರಬೇತಿ ಕಾರ್ಯಾಗಾರವಾಗಿತ್ತು. ಅಚಾಲಾಸಿಯಾ ಕಾರ್ಡಿಯಾ, ಆಹಾರ ಸೇವಿಸುವಲ್ಲಿ ತೊಂದರೆ, ಅನ್ನನಾಳದ ಅಸ್ವಸ್ಥತೆಯನ್ನು ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಎಂಬ ಕಡಿಮೆ ಛೇದನದ, ಗಾಯ ರಹಿತ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಿಂದ ನಿರ್ವಹಿಸಬಹುದು. ಈ ಕಾರ್ಯವಿಧಾನವು ಅಂದುಕೊಂಡಂತೆ ಯಶಸ್ವಿಯಾಗಿ ನಡೆದರೆ ರೋಗಿಯನ್ನು 48 ಗಂಟೆಗಳ ಒಳಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರು, […]

ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕರಾವಳಿಯ ಮೊದಲ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಅಸ್ಥಿಮಜ್ಜೆ ಕಸಿ ಯಶಸ್ವಿ ಚಿಕಿತ್ಸೆ

ಮಣಿಪಾಲ: ಒಂದು ವರ್ಷದ ಬಾಲಕನಿಗೆ ಸಿವಿಯರ್ ಕಂಬೈನ್ಡ್ ಇಮ್ಯುನೊ ಡೆಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆ ಇರುವುದು ಪತ್ತೆಯಾಗಿತ್ತು. ಬಾಲಕನನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಅಸ್ಥಿಮಜ್ಜೆ (ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಶನ್) ಕಸಿ ಮಾಡಲು ಕಳುಹಿಸಲಾಗಿತ್ತು. ಅಸ್ಥಿಮಜ್ಜೆ ಕಸಿ ಮಾಡುವುದೊಂದೆ ಆತನ ಕಾಯಿಲೆಯನ್ನು ಗುಣಪಡಿಸಬಲ್ಲ ಏಕೈಕ ಚಿಕಿತ್ಸೆಯಾಗಿತ್ತು. ಮೂಳೆ ಮಜ್ಜೆಯ ಕಸಿ ಎನ್ನುವುದು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡವು ಮಾಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದೆ. ಅಸ್ಥಿ ಮಜ್ಜೆ ಕಸಿ […]

ಮಣಿಪಾಲ: ಆಗಸ್ಟ್‌ 13 ರಂದು ತಪೋವನ ಲೈಫ್‌ ಸ್ಪೇಸ್‌ನಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಮಣಿಪಾಲ: ಮಣಿಪಾಲ್‌ ಯೂನಿವರ್ಸಲ್‌ ಪ್ರೆಸ್‌, ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಮತ್ತು ತಪೋವನ, ಮಣಿಪಾಲ ‌ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ‘ರಾಷ್ಟ್ರಭಕ್ತಿ’ ಎಂಬ ವಿಷಯದ ಮೇಲೆ ಮಕ್ಕಳಿಗಾಗಿ ಚಿತ್ರಕಲೆ, ಸಂಗೀತ  ಮತ್ತು ಕಥೆ ಹೇಳುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಮಣಿಪಾಲದ ತಪೋವನ ಲೈಫ್‌ ಸ್ಪೇಸ್‌ನಲ್ಲಿ ಆಗಸ್ಟ್‌ 13 ರವಿವಾರ ಳಗ್ಗೆ 10 ಗಂಟೆಯಿಂದ ಸ್ಪರ್ಧೆ ಆರಂಭವಾಗಲಿದೆ. ಪ್ರತಿ ಸ್ಪರ್ಧೆಯಲ್ಲಿಯೂ 1 ರಿಂದ 3, 4 ರಿಂದ 7 ಮತ್ತು 8ರಿಂದ 10ನೆಯ ತರಗತಿಯವರೆಗಿನ ಮೂರು ವಿಭಾಗಗಳಿವೆ. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಳಿಗಾಗಿ ಭಾವನಾ ಭಟ್ [ 6364919422] , ಮಹೇಶ ಮಲ್ಪೆ [8660637172] ಇವರನ್ನು ಸಂಪರ್ಕಿಸಬಹುದಾಗಿದೆ.

ಕರ್ನಾಟಕದಲ್ಲೇ ಮೊದಲ ಬಾರಿಗೆ ಅತ್ಯಂತ ಕ್ಲಿಷ್ಟ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಹೆರಿಗೆ ನಡೆಸಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು

ಮಣಿಪಾಲ: 31 ವರ್ಷ ವಯಸ್ಸಿನ ಮಹಿಳೆಯು ಎರಡನೆ ಬಾರಿ ಗರ್ಭ ಧರಿಸಿದ್ದು, 34ನೇ ವಾರದ ಗರ್ಭಾವಸ್ಥೆಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ಮಗುವಿನ ಕಸ (Placenta) ಗರ್ಭಕೋಶದ ಬಾಯಿಗೆ ಅಡ್ಡಲಾಗಿರುವ ವಿಶೇಷ ಸ್ಥಿತಿ ಬೆಳಕಿಗೆ ಬಂದಿತ್ತು. ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿದ ನಂತರ ಪ್ಲಾಸೆಂಟಾ ಪ್ರೀವಿಯಾ ಮತ್ತು ಪ್ಲಾಸೆಂಟಾ ಅಕ್ರಿಟಾ ಇರುವ ಸಾಧ್ಯತೆ ಕಂಡು ಬಂದಿತು. ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ರೋಗಿಗಿರುವ ತೊಂದರೆಯನ್ನು ದೃಢಪಡಿಸಿತು. ಪರಿಸ್ಥಿತಿಯನ್ನು ಅರಿತ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ಮುಖ್ಯಸ್ಥ ಡಾ. ಶ್ರೀಪಾದ ಹೆಬ್ಬಾರ್ […]