ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿ ಡಾ. ಪದ್ಮರಾಜ್ ಹೆಗ್ಡೆ ನೇಮಕ

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಕೆ.ಎಂ.ಸಿ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ಪದ್ಮರಾಜ್ ಹೆಗ್ಡೆ ಅವರನ್ನು ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿ ಜ.1ರಂದು ನೇಮಕ ಮಾಡಲಾಗಿದೆ. ಡಾ.ಪದ್ಮರಾಜ್ ಹೆಗ್ಡೆ ಉಡುಪಿ ಜಿಲ್ಲೆಯ ಆತ್ರಾಡಿಯವರು. ಇವರು ಎಂಬಿಬಿಎಸ್ ಮತ್ತು ಎಂಎಸ್ ಜನರಲ್ ಸರ್ಜರಿ ಮತ್ತು ಎಂ.ಸಿಎಚ್ ಅನ್ನು (ಜೆನಿಟೋ ಯುರಿನರಿ ಸರ್ಜರಿ) ಮಣಿಪಾಲದ ಕೆಎಂಸಿಯಲ್ಲಿ ಪೂರ್ಣಗೊಳಿಸಿದ್ದಾರೆ. ಸ್ಕಾಟ್ಲೆಂಡ್ ನ ಗ್ಲಾಸ್ಗೋ ವಿಶ್ವವಿದ್ಯಾಲಯವು ಇವರಿಗೆ ಎಫ್ಆರ್ಸಿಎಸ್ ನೀಡಿದೆ ಮತ್ತು ಇವರು ಆಸ್ಪತ್ರೆ ಆಡಳಿತ ಮತ್ತು […]
ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ: ಕೆ.ರಘುಪತಿ ಭಟ್

ಕಾರ್ಕಳ: ಇಲ್ಲಿನ ಪರ್ಕಳ-ಮಣಿಪಾಲ ರಾ.ಹೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಣಿಪಾಲದಿಂದ ಉಡುಪಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕೆಳಪರ್ಕಳ ರಸ್ತೆಯನ್ನು ಸರಿಪಡಿಸಲು ಶಾಸಕ ರಘುಪತಿ ಭಟ್ ಸಭೆ ನಡೆಸಿದ್ದು ಅದರಂತೆ ಈಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ವಾಹನ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ […]
ಡಿ.23 ರಂದು ಮುಕ್ತಾಂಜಲಿ ನಾಟ್ಯ ಸಂಸ್ಥೆ ವತಿಯಿಂದ ಕ್ರಿಸ್ ಮಸ್ ಸಂಭ್ರಮಾಚಣೆ

ಮಣಿಪಾಲ: ಮುಕ್ತಾಂಜಲಿ ನಾಟ್ಯ ಸಂಸ್ಥೆ, ಮದರ್ ಎಂಡ್ ಚೈಲ್ಡ್ ಟ್ಯಾಲೆಂಟ್ ಶೋ ಹಾಗೂ ರೋಟರಿ ಕ್ಲಬ್ ಮಣಿಪಾಲ್ ಹಿಲ್ಸ್ ವತಿಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆಯ ಪ್ರಯುಕ್ತ ಕಿಡ್ಜೀ ಮಕ್ಕಳಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಿ.23 ರಂದು ಸಂಜೆ 5 ಗಂಟೆಗೆ ಮಣಿಪಾಲದ ಹೋಟೇಲ್ ಆಶ್ಲೇಶ್ ಇದರ ವಜ್ರ ಹಾಲಿನಲ್ಲಿ ನಡೆಯುವ ಸಮಾರಂಭವನ್ನು ಬೆಲ್ ಒ ಸೀಲ್ ನ ನಿರ್ದೇಶಕಿ ಶ್ರೀಮತಿ ಸಪ್ನಾ ಜೆನಿಫರ್ ಸಾಲಿನ್ಸ್ ಉದ್ಘಾಟಿಸಲಿದ್ದಾರೆ. ಹಾಡು ನೀ ಹಾಡು ರಿಯಾಲಿಟಿ ಶೋನ ಮಾರ್ಗದರ್ಶಕ […]
ಮಣಿಪಾಲ: ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಉದ್ಘಾಟನೆ

ಮಣಿಪಾಲ: ಉಡುಪಿ-ಮಣಿಪಾಲದ ಜನರಿಗಾಗಿ ಲಕ್ಷ್ಮೀಂದ್ರನಗರದ ಪ್ರೀಮಿಯರ್ ಅಪ್ ಟೌನ್ ನಲ್ಲಿ ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಇದರ ಉದ್ಘಾಟನೆಯು ಡಿ.18 ಭಾನುವಾರದಂದು ನಡೆಯಿತು. ಸ್ಟುಡಿಯೋವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಮ್ಮ ಊರಿನ ಹುಡುಗಿಯೊಬ್ಬಳು ಇಷ್ಟು ಉತ್ತಮ ಸಾಧನೆ ಮಾಡಿರುವುದನ್ನು ನೋಡಿದಾಗ ನನಗೆ ಹೆಮ್ಮೆ ಎನಿಸಿತು. ಆಕೆ ತಾನೇ ಖುದ್ದು ವಿನ್ಯಾಸ ಮಾಡಿರುವ ವಸ್ತ್ರಗಳನ್ನು ನೋಡಲು ಸಂತೋಷವಾಯಿತು. ಆಕೆಯ ಪ್ರತಿಭೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಉಡುಪಿಯ ಜನತೆ ಗುಣಮಟ್ಟದ ವಸ್ತುಗಳನ್ನು ಖರೀದಿಸುವುದಕ್ಕೆ ಹೆಸರುವಾಸಿಯಾಗಿದ್ದಾರೆ. ರಿಯಾ […]
ಲೈಂಗಿಕ ಹಿಂಸಾಚಾರದ ಪ್ರಕರಣಗಳಲ್ಲಿ ಸಮಗ್ರ ವೈದ್ಯಕೀಯ ಆರೈಕೆಗಾಗಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಮಣಿಪಾಲ: ಭಾರತ – ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್, ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್, ವೈದ್ಯಕೀಯ ಮತ್ತು ನವೀನ ವಿಧಿವಿಜ್ಞಾನ ಕೇಂದ್ರ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲದ ಸಹಯೋಗದೊಂದಿಗೆ ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಬಲದೊಂದಿಗೆ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸೆ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ವೈದ್ಯಕೀಯ ವಿಚಾರ ಸಂಕಿರಣವನ್ನು ಡಿಸೆಂಬರ್ 10 ಮತ್ತು11 ರಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ವಿಚಾರ ಸಂಕಿರಣವು ಭಾರತದಾದ್ಯಂತ ಲೈಂಗಿಕ ಶೋಷಣೆಯಲ್ಲಿ […]