ಮಾಹೆಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರ ಪ್ರಾರಂಭ

ಮಣಿಪಾಲ: ಡಿ.11 ರಂದು ಭಾರತೀಯ ಭಾಷಾ ದಿವಸ್ ಅಂಗವಾಗಿ ಮಾಹೆಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಆರಂಭಿಸಲಿದೆ. ತಮಿಳು ಕವಿ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಹುಭಾಷಾವಾದಿ, ಚಿನ್ನಸ್ವಾಮಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಭಾರತೀಯ ಭಾಷೆಗಳ ಸಂಸ್ಮರಣಾರ್ಥವಾಗಿ ಯುಜಿಸಿಯು ಹೊರಡಿಸಿದ ಘೋಷಣೆಯಿಂದ ಪ್ರೇರಿತವಾಗಿ ಮಾಹೆಯಲ್ಲಿಯೂ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ಬ್ಯಾರಿ ಮತ್ತು ಕೊಡವ ಭಾಷೆಗಳ […]

ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್‌ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]

ಕರಾವಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಪಾರ್ಕಿನ್ಸನ್ ಕಾಯಿಲೆಗೆ ನವೀನ ತಂತ್ರಜ್ಞಾನದ ಚಿಕಿತ್ಸೆ ನೀಡಿದ ಕಸ್ತೂರ್ಬಾ ಆಸ್ಪತ್ರೆ

ಮಣಿಪಾಲ: ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಪ್ರಯತ್ನವಾಗಿದೆ. ಮಹಿಳೆಯು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಇದರಿಂದ ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಸಿದ್ದರು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು ನಿಧಾನಗತಿಯ ಕಾರಣದಿಂದಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವುದು ಮತ್ತು ನಡಿಗೆಗೆ ತೊಂದರೆಯಾಗಿತ್ತು. ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಿರೀಶ್ ಮೆನನ್, ನರವಿಜ್ಞಾನ ವಿಭಾಗದ […]

ಮಾಹೆ ವತಿಯಿಂದ ಡಿಸೆಂಬರ್ 19 ರಿಂದ 21 ರವರೆಗೆ ಪ್ರಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಆಯೋಜನೆ

ಮಣಿಪಾಲ: ಡಿಸೆಂಬರ್ 19 ರಿಂದ 21 ರವರೆಗೆ ಮಾಹೆಯ ಕಸ್ತೂರ್ಬಾ ವೈದ್ಯಕೀಯ ಕಾಲೇಜು ತನ್ನ ಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಅನ್ನು ಆಯೋಜಿಸುತ್ತಿದೆ. ವಿವಿಧ ಭಾರತೀಯ ಸಂಸ್ಥೆಗಳ ನರವಿಜ್ಞಾನಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನೊಣಗಳು, ಸೊಳ್ಳೆಗಳು, ಇಲಿಗಳು, ಮಂಗಗಳು ಮತ್ತು ರೋಗಿಗಳ ಜನಸಂಖ್ಯೆಯಂತಹ ವಿವಿಧ ಮಾದರಿ ಜೀವಿಗಳ ಮೇಲೆ ಕೆಲಸ ಮಾಡುತ್ತಿರುವ ಭಾರತೀಯ ನರವಿಜ್ಞಾನದ ಸಂಶೋಧಕರು ಮತ್ತು ಚಿಕಿತ್ಸಕರನ್ನು ಒಟ್ಟುಗೂಡಿಸುವ ಮೂಲಕ ನ್ಯೂರೋಬಯಾಲಾಜಿಕಲ್ ಸಮ್ಮೇಳನವು ನ್ಯೂರೋಸೈಕಿಯಾಟ್ರಿಕ್ ಅಸ್ವಸ್ಥತೆಗಳು ಮತ್ತು ಮೂಲಭೂತ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಮೆದುಳಿನ […]

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]