ಮಣಿಪಾಲ: ತಪೋವನ ವತಿಯಿಂದ ಕಥಾಕಮ್ಮಟ ಕಾರ್ಯಾಗಾರ

ಮಣಿಪಾಲ: ನವೆಂಬರ್ 27 ರಂದು ತಪೋವನ ಮತ್ತು ಚಂದ ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ಹೊಸ ಕಥೆಗಾರರಿಗಾಗಿ ಖ್ಯಾತ ಸಾಹಿತಿ ವಸುಧೇಂದ್ರ ಅವರಿಂದ ಕಥಾ ಕಮ್ಮಟ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಾಗಾರದ ಶುಲ್ಕ 1000ರೂ. ಊಟೋಪಚಾರದ ವ್ಯವಸ್ಥೆ ಇದೆ. ಹೆಚ್ಚಿನ ವಿವರಗಳಿಗಾಗಿ 8762563517 ಅನ್ನು ಸಂಪರ್ಕಿಸುವಂತೆ ರೇವತಿ ನಾಡಿಗೇರ್ ತಿಳಿಸಿದ್ದಾರೆ.
ಮಣಿಪಾಲ: ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮ

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಭಜನಾ ಮಂದಿರ ಮುಂಡ್ಕಿನಜೆಡ್ಡು, ಚೇರ್ಕಾಡಿ ಇದರ ಅಧ್ಯಕ್ಷ ರಾಜೇಶ್ ಪಾಟೀಲ್ ಇವರನ್ನು ಗೌರವಿಸಲಾಯಿತು.
ಮಣಿಪಾಲ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ 7ನೇ ಎಟಿಎಂ ಶಾಖೆ ಉದ್ಘಾಟನೆ

ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಮಣಿಪಾಲ ಬ್ಯಾಂಕಿನ ನೂತನ ಎಟಿಎಂ ಶಾಖೆ ಭಾನುವಾರದಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್ ನ ನೆಲ ಅಂತಸ್ತಿನಲ್ಲಿ ಉದ್ಘಾಟನೆಗೊಂಡಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಎಟಿಎಂ ಅನ್ನು ಉದ್ಘಾಟಿಸಿ ಮಾತನಾಡಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಆಸ್ತಿಯೆಂದರೆ ಅದು ನವೋದಯ ಸ್ವ-ಸಹಾಯ ಸಂಘದ ಮಹಿಳೆಯರು. ಎಸ್.ಸಿ.ಡಿ.ಸಿ.ಸಿಯು ಎಲ್ಲಾ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಗಿಂತ ಹೆಚ್ಚು ಬಡ್ಡಿಯನ್ನು (8%) ಠೇವಣಿದಾರರಿಗೆ […]
ನ.7 ರಂದು ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮ

ಮಣಿಪಾಲ: ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮವು ನ.6 ರವಿವಾರ ಮತ್ತು ನ.7ಸೋಮವಾರದಂದು ನಡೆಯಲಿರುವುದು. ನ.6 ರಂದು ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ದೀಪಪ್ರಜ್ವಲನೆ, ಭಜನಾ ಪ್ರಾರಂಭ ಮತ್ತು ದೀಪ ಸ್ಥಾಪನೆ ನಡೆಯಲಿದ್ದು, ನ.7 ರಂದು ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ಮತ್ತು ಭಜನಾ ಏಕಾಹದಲ್ಲಿ ಭಾಗವಹಿಸಿದ ಭಜನಾ ಮಂಡಳಿಗಳಿಗೆ ಗೌರವಾರ್ಪಣೆ ನಡೆಯಲಿರುವುದು. ಸಭಾ ಕಾರ್ಯಕ್ರಮದ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]
ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು […]