ಮಣಿಪಾಲ: ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಉದ್ಘಾಟನೆ

ಮಣಿಪಾಲ: ಉಡುಪಿ-ಮಣಿಪಾಲದ ಜನರಿಗಾಗಿ ಲಕ್ಷ್ಮೀಂದ್ರನಗರದ ಪ್ರೀಮಿಯರ್ ಅಪ್ ಟೌನ್ ನಲ್ಲಿ ದ ರಾಯೋ ಮಾಬೆನ್ ಡಿಸೈನರ್ ಸ್ಟುಡಿಯೋ ಇದರ ಉದ್ಘಾಟನೆಯು ಡಿ.18 ಭಾನುವಾರದಂದು ನಡೆಯಿತು. ಸ್ಟುಡಿಯೋವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಮ್ಮ ಊರಿನ ಹುಡುಗಿಯೊಬ್ಬಳು ಇಷ್ಟು ಉತ್ತಮ ಸಾಧನೆ ಮಾಡಿರುವುದನ್ನು ನೋಡಿದಾಗ ನನಗೆ ಹೆಮ್ಮೆ ಎನಿಸಿತು. ಆಕೆ ತಾನೇ ಖುದ್ದು ವಿನ್ಯಾಸ ಮಾಡಿರುವ ವಸ್ತ್ರಗಳನ್ನು ನೋಡಲು ಸಂತೋಷವಾಯಿತು. ಆಕೆಯ ಪ್ರತಿಭೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಉಡುಪಿಯ ಜನತೆ ಗುಣಮಟ್ಟದ ವಸ್ತುಗಳನ್ನು ಖರೀದಿಸುವುದಕ್ಕೆ ಹೆಸರುವಾಸಿಯಾಗಿದ್ದಾರೆ. ರಿಯಾ […]
ಲೈಂಗಿಕ ಹಿಂಸಾಚಾರದ ಪ್ರಕರಣಗಳಲ್ಲಿ ಸಮಗ್ರ ವೈದ್ಯಕೀಯ ಆರೈಕೆಗಾಗಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಮಣಿಪಾಲ: ಭಾರತ – ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್, ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್, ವೈದ್ಯಕೀಯ ಮತ್ತು ನವೀನ ವಿಧಿವಿಜ್ಞಾನ ಕೇಂದ್ರ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಣಿಪಾಲದ ಸಹಯೋಗದೊಂದಿಗೆ ಬೆಂಗಳೂರಿನ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಬಲದೊಂದಿಗೆ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸೆ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ವೈದ್ಯಕೀಯ ವಿಚಾರ ಸಂಕಿರಣವನ್ನು ಡಿಸೆಂಬರ್ 10 ಮತ್ತು11 ರಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ವಿಚಾರ ಸಂಕಿರಣವು ಭಾರತದಾದ್ಯಂತ ಲೈಂಗಿಕ ಶೋಷಣೆಯಲ್ಲಿ […]
ಮಾಹೆಯಲ್ಲಿ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರ ಪ್ರಾರಂಭ

ಮಣಿಪಾಲ: ಡಿ.11 ರಂದು ಭಾರತೀಯ ಭಾಷಾ ದಿವಸ್ ಅಂಗವಾಗಿ ಮಾಹೆಯು ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಆರಂಭಿಸಲಿದೆ. ತಮಿಳು ಕವಿ, ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಹುಭಾಷಾವಾದಿ, ಚಿನ್ನಸ್ವಾಮಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಭಾರತೀಯ ಭಾಷೆಗಳ ಸಂಸ್ಮರಣಾರ್ಥವಾಗಿ ಯುಜಿಸಿಯು ಹೊರಡಿಸಿದ ಘೋಷಣೆಯಿಂದ ಪ್ರೇರಿತವಾಗಿ ಮಾಹೆಯಲ್ಲಿಯೂ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ಬ್ಯಾರಿ ಮತ್ತು ಕೊಡವ ಭಾಷೆಗಳ […]
ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]
ಕರಾವಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಪಾರ್ಕಿನ್ಸನ್ ಕಾಯಿಲೆಗೆ ನವೀನ ತಂತ್ರಜ್ಞಾನದ ಚಿಕಿತ್ಸೆ ನೀಡಿದ ಕಸ್ತೂರ್ಬಾ ಆಸ್ಪತ್ರೆ

ಮಣಿಪಾಲ: ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಪ್ರಯತ್ನವಾಗಿದೆ. ಮಹಿಳೆಯು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಇದರಿಂದ ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಸಿದ್ದರು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು ನಿಧಾನಗತಿಯ ಕಾರಣದಿಂದಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವುದು ಮತ್ತು ನಡಿಗೆಗೆ ತೊಂದರೆಯಾಗಿತ್ತು. ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಿರೀಶ್ ಮೆನನ್, ನರವಿಜ್ಞಾನ ವಿಭಾಗದ […]