ಕಾರ್ಕಳ: ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಕಾರ್ಕಳ: ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮವು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಾಜ್ಯದಾದ್ಯಂತ ಬೀಡಿ ಕಾರ್ಮಿಕರಿಗೆ ಈ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಈ ಕಾರ್ಡ್ ಮೂಲಕ ಅಪಘಾತ ಪರಿಹಾರ ಮತ್ತು ಸಹಜ ಮರಣ ಪರಿಹಾರ ಸೌಲಭ್ಯಗಳು ದೊರೆಯುತ್ತವೆ. ಸಂಘದ ಮುಖಂಡ ಕವಿರಾಜ್ ಎಸ್. ಕಾಂಚನ್ ಅವರು ಮಾತನಾಡಿ, […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ” ಖ್ಯಾತಿಯ ಜೆಪಿ ತುಮ್ಮಿನಾಡು

ಮಂಗಳೂರು: ತುಳು ಚಿತ್ರರಂಗದ ಖ್ಯಾತ ಕಲಾವಿದ, ಹಾಗೇ ಇತ್ತೀಚೆಗೆ ಫುಲ್ ಹಿಟ್ ಆದ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಂ ಸೋ” ಚಿತ್ರದ ನಟ, ನಿರ್ದೇಶಕ ಜೆಪಿ ತುಮ್ಮಿನಾಡು ಅವರು ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮೇ 6ರಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದಲ್ಲಿ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಕುಟುಂಬ ಸದಸ್ಯರು, ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದ ಮದುವೆ ಶಾಸ್ತ್ರಗಳು ನಡೆದಿದ್ದು, ಮಾಂಗಲ್ಯಧಾರಣೆಯ ಫೋಟೋಗಳು ಮತ್ತು ವಿಡಿಯೋಗಳು […]
ನಿಮ್ಮ ಮಕ್ಕಳನ್ನು ಲೆಕ್ಕದಲ್ಲಿ ಪಕ್ಕಾ ಕ್ರಿಯೇಟಿವ್ ಮಾಡುತ್ತೆ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮೇ 11 ರಿಂದ ಶುರುವಾಗುವ ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಗಣಿತ ಕೌಶಲ್ಯ ಪಡೀರಿ

ಉಡುಪಿ: ಮಕ್ಕಳಲ್ಲಿ ಗಣಿತದ ಮೇಲಿನ ಆಸಕ್ತಿ ಹೆಚ್ಚಿಸಿ, ಅವರಿಗೆ ಪಾಠಗಳನ್ನು ಸುಲಭವಾಗಿ ಕಲಿಸುವ ಉದ್ದೇಶದಿಂದ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವತಿಯಿಂದ ವಿಶೇಷ “ಟೇಬಲ್ಸ್ ವರ್ಕ್ಶಾಪ್” ನ್ನು ಮೇ 11 ರಿಂದ ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ 99 ರವರೆಗಿನ ಟೇಬಲ್ಸ್ ಗಳನ್ನು ಮನರಂಜನಾತ್ಮಕವಾಗಿ ಹಾಗೂ ಸುಲಭ ವಿಧಾನಗಳ ಮೂಲಕ ಕಲಿಸಲಾಗುತ್ತದೆ. ಜೊತೆಗೆ ಪಾಠಗಳನ್ನು ಅವರಿಗೆ ಖುಷಿ ಕೊಡುವ ಚಟುವಟಿಕೆಗಳನ್ನು, ಕ್ವಿಜ್ ಹಾಗೂ ಗೇಮ್ಸ್ಗಳ ಮೂಲಕವೂ ಕ್ರಿಯಾಶೀಲವಾಗಿ ಹೇಳಿಕೊಡಲಾಗುತ್ತದೆ. ಒಟ್ಟಾರೆಯಾಗಿ ಮಕ್ಕಳಲ್ಲಿ ಗಣಿತ ಕೌಶಲ್ಯವನ್ನು ವೃದ್ಧಿಸುವ […]
ವೆನ್ ಲಾಕ್ ಆಸ್ಪತ್ರೆಯಲ್ಲಿ ಶಾಖಾಘಾತ ಚಿಕಿತ್ಸೆಗೆ ವಿಶೇಷ 10 ಹಾಸಿಗೆಗಳ ಘಟಕ

ಮಂಗಳೂರು: ಕರಾವಳಿಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ಪರಿಣಾಮವಾಗಿ ಶಾಖಾಘಾತ (Heat Stroke) ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್ನ 5ನೇ ಮಹಡಿಯಲ್ಲಿ ಶಾಖಾಘಾತ ರೋಗಿಗಳ ಚಿಕಿತ್ಸೆಗೆ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದ್ದಾರೆ. ಶಾಖಾಘಾತ ಎಂದರೇನು? ಶಾಖಾಘಾತವು ಜೀವಕ್ಕೆ ಅಪಾಯಕಾರಿ ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ದೇಹದ ಉಷ್ಣತೆ 104°F (40°C) ಅಥವಾ ಅದಕ್ಕಿಂತ ಹೆಚ್ಚು ಏರಿದಾಗ ದೇಹದ ತಾಪಮಾನ ನಿಯಂತ್ರಣ ವ್ಯವಸ್ಥೆ ವಿಫಲವಾಗುತ್ತದೆ. ತಕ್ಷಣ […]
ಮುಂಗಾರು ಮಳೆಗೆ ಮಂಗಳೂರು ರೆಡಿ; ಎಲ್ಲಾ ತುರ್ತು ಸೇವೆಗಳನ್ನು ನಿಭಾಯಿಸಲು ಸಿದ್ದವಾದ ಜಿಲ್ಲಾಡಳಿತ

ಮಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ, ಭಾರೀ ಮಳೆಯಿಂದ ಸಂಭವಿಸಬಹುದಾದ ಹಾನಿಯನ್ನು ತಡೆಯಲು ಮಂಗಳೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಈ ಬಾರಿ ವಿಕೇಂದ್ರೀಕೃತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ರೂ. 30,000 ಅನುದಾನವನ್ನು ಮೀಸಲಿಡಲಾಗಿದೆ. ಭೂಕುಸಿತ, ಮನೆಗಳಿಗೆ ನೀರು ನುಗ್ಗುವುದು, ಮರಗಳು […]