ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ಯುವ ಸಬಲೀಕರಣ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ‘ಯುವ ಸಬಲೀಕರಣ’ ತರಬೇತಿ ಕಾರ್ಯಕ್ರಮವನ್ನು ಆ.5 ರಂದು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ಜೇಸಿಐ ಮಣಿಪಾಲ ಹಿಲ್ ಸಿಟಿ ಅಧ್ಯಕ್ಷ ಜೇಸಿ ಜಯಂತ ತಲವಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಕಾಂತರಾಜ್ ಎ.ಎನ್., ಸಂಪನ್ಮೂಲ ವ್ಯಕ್ತಿಯಾಗಿ ಜೇ.ಸಿ.ಐ. ಸೆನೆಟರ್ ಸುಭಾಷ್ ಬಂಗೇರ, ಐಕಾನಿಕ್ ತರಬೇತುದಾರರು, ಜೇಸಿಐ ಭಾರತ, ಹಾಗೂ ಜೊತೆಗೆ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ಜೇ.ಸಿ.ಐ. ನ […]

ಮಣಿಪಾಲ: ಮಾಹೆ ವತಿಯಿಂದ ನಮಾಮಿ ಗಂಗೆ ಅರಿವು ಕಾರ್ಯಾಗಾರ

ಮಣಿಪಾಲ: ಮಾಹೆ ವತಿಯಿಂದ ಎಂ.ಸಿ.ಎನ್.ಎಸ್ ನ ಪ್ಲಾಟಿನಂ ಹಾಲ್ ನಲ್ಲಿ ಶನಿವಾರದಂದು ನಡೆದ ನಮಾಮಿ ಗಂಗೆ ಅರಿವು ಕಾರ್ಯಾಗಾರದಲ್ಲಿ ನದಿಯ ಪಾವಿತ್ರ್ಯತೆ, ಅವುಗಳ ಪ್ರಾಮುಖ್ಯತೆ, ಮನುಷ್ಯನ ಜೀವನದಲ್ಲಿ ನೀರಿನ ಪಾತ್ರ, ಹಿಂದಿನ ಕಾಲದಿಂದಲೂ ರಾಜ ಮಹಾರಾಜರುಗಳಿಂದ ಕೆರೆಗಳನ್ನು ಕಟ್ಟಿಸಿದ ಉದ್ದೇಶ ಇವೆಲ್ಲದರ ಬಗ್ಗೆ ಶಾಲಾ-ಕಾಲೇಜುಗಳ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಗಣ್ಯರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗಂಗಾನದಿಯ ಹುಟ್ಟು ಹಾಗೂ ಭಾರತದಲ್ಲಿ ಅದಕ್ಕೆ ಇರುವ ಮಹತ್ವದ ಬಗ್ಗೆ ತಿಳಿಸಲಾಯಿತು.

ಎಂಐಟಿಯ ಪ್ರಾಧ್ಯಾಪಕರಾದ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಮಣಿಪಾಲ: ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಎರಡು ಗೌರವಾನ್ವಿತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ತಮ್ಮ ಅಸಾಧಾರಣ ಸಂಶೋಧನಾ ಕೊಡುಗೆಗಳಿಗಾಗಿ ಗುರುತಿಸಲ್ಪಟ್ಟಿದ್ದಾರೆ ಹಾಗೂ ಸಂಸ್ಥೆಗೆ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಾರೆ ಮತ್ತು ಅತ್ಯಾಧುನಿಕ ಸಂಶೋಧನೆಯಲ್ಲಿ ಅದರ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ದುಬೈನ ಅಮಿಟಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಂಪ್ಯೂಟೇಶನಲ್ ಇಂಟೆಲಿಜೆನ್ಸ್ ಮತ್ತು ನಾಲೆಡ್ಜ್ ಎಕಾನಮಿ (ICCIKE2023) ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ನರೇಂದ್ರ ಖಾತ್ರಿ ಅವರಿಗೆ ಅತ್ಯುತ್ತಮ ಪೇಪರ್ ಪೆಸೆಂಟೇಷನ್ ಗಾಗಿ […]

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯಲ್ಲಿ ಅಂತರಶಿಸ್ತೀಯ ಏಕೀಕರಣ ಕುರಿತು ಸಮಾವೇಶ

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸಹಯೋಗವನ್ನು ಬೆಳೆಸುವ ಒಂದು ಭವ್ಯವಾದ ಪ್ರಯತ್ನದಲ್ಲಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ‘ಮಾಹೆ ಹೆಲ್ತ್ ಸೈನ್ಸಸ್ ರಿಸರ್ಚ್ ವರ್ಟಿಕಲ್ಸ್‌ನ ಸಮತಲ ಏಕೀಕರಣ’ ಎಂಬ ವಿಷಯದ ಬಗ್ಗೆ ಒಂದು ದಿನದ ಸಮಾವೇಶ ಜುಲೈ 21ರಂದು ಮಣಿಪಾಲದ ಮಾಹೆ  ಕ್ಯಾಂಪಸ್‌ನಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ  ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ  ಡಾ. ಶರತ್ ಕುಮಾರ್ ರಾವ್ ಮತ್ತು ಮಾಹೆ […]

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ: ಇಬ್ಬರ ಬಂಧನ; ಐದು ಯುವತಿಯರ ರಕ್ಷಣೆ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ್ದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಭವಾನಿ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆಯ ಜಾಲಕ್ಕೆ ಸಿಲುಕಿದ್ದ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬ ಆರೋಪಿಗಳನ್ನು ಪೊಲೀಸರು […]