ತನುಜಾಸ್ ಮೈಂಡ್ ಥೆರಪಿ ಆಪ್ತಸಮಾಲೋಚನಾ ಕೇಂದ್ರ ಉದ್ಘಾಟನೆ

ಮಣಿಪಾಲ: ಖ್ಯಾತ ವ್ಯಕ್ತಿತ್ವ ತರಬೇತುಗಾರ್ತಿ ತನುಜಾ ಮಾಬೆನ್ ರವರ ತನುಜಾಸ್ ಮೈಂಡ್ ಥೆರಪಿ ಆಪ್ತಸಮಾಲೋಚನಾ ಕೇಂದ್ರವು ಅ.17 ಸೋಮವಾರದಂದು ಮಣಿಪಾಲದ ಕೆನರಾ ಬ್ಯಾಂಕಿನ ಎದುರು ಮನಿಸಿಪಲ್ ಕಾಂಪ್ಲೆಕ್ಸ್ ನ ಮೊದಲನೆ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಣಿಪಾಲ್ ಟೆಕ್ನಾಲಜೀಸ್ ನ ಕಾರ್ಯಾಧ್ಯಕ್ಷ ಗೌತಮ್ ಪೈ ಮಾತನಾಡಿ, ಇಂದಿನ ಕಾಲದಲ್ಲಿ ನಮ್ಮಲ್ಲಿ ಹೆಚ್ಚಿನವರು ನಮ್ಮ ಭೌತಿಕ ದೇಹದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುತ್ತೇವೆ. ಮನುಷ್ಯನ ದೇಹವನ್ನು ಗಮನಿಸಿದರೆ ಮಸ್ತಿಷ್ಕವು ನಮ್ಮ ದೇಹದ ಅತ್ಯಂತ ಕಡಿಮೆ ಅರ್ಥಮಾಡಿಕೊಳ್ಳಲಾದ ಭಾಗ. […]

ಅಕ್ಟೋಬರ್ 17 ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳ

ಉಡುಪಿ: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಅಕ್ಟೋಬರ್ 17 ರಂದು ಬೆಳಗ್ಗೆ 9.30 ಕ್ಕೆ ಮಣಿಪಾಲ ಪ್ರಗತಿನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳ ನಡೆಯಲಿದೆ. ಅಪ್ರೆಂಟಿಷಿಪ್ ಮೇಳದಲ್ಲಿ ಭಾಗವಹಿಸಲು ಐ.ಟಿ.ಐ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು https://www.apprenticeshipindia.gov.in/candidate- registration ನಲ್ಲಿ ಹಾಗೂ ನೋಂದಣಿಯಾಗುವ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿ ನೀಡುವ ಕಂಪನಿ ಹಾಗೂ ಕೈಗಾರಿಕೆಗಳು https://www.apprenticeshipindia.gov.in/establishment-registrationನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಮೇಳದಂದು ಸಂಸ್ಥೆಯಲ್ಲಿ ಶಿಶಿಕ್ಷು ನೋಂದಣಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ:9900329668, 9964247101, […]

ಅಕ್ಟೋಬರ್ 19 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]

ಮಣಿಪಾಲ: ಅ.17 ರಂದು ತನುಜಾಸ್ ಮೈಂಡ್ ಥೆರಪಿ ಉದ್ಘಾಟನಾ ಕಾರ್ಯಕ್ರಮ

ಮಣಿಪಾಲ: ಖ್ಯಾತ ವ್ಯಕ್ತಿತ್ವ ತರಬೇತುಗಾರ್ತಿ ತನುಜಾ ಮಾಬೆನ್ ರವರ ತನುಜಾಸ್ ಮೈಂಡ್ ಥೆರಪಿ ಅ.17 ಸೋಮವಾರದಂದು 10 ಗಂಟೆಗೆ ಮಣಿಪಾಲದ ಕೆನರಾ ಬ್ಯಾಂಕ್ ನ ಎದುರು ಮನಿಸಿಪಲ್ ಕಾಂಪ್ಲೆಕ್ಸ್ ನ ಮೊದಲನೆ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದ್ದು, ಶಾಸಕ ಕೆ ರಘುಪತಿ ಭಟ್, ಮನಿಪಾಲ್ ಟೆಕ್ನಾಲಜೀಸ್ ನ ಕಾರ್ಯಾಧ್ಯಕ್ಷ ಗೌತಮ್ ಪೈ, ಶಿಕ್ಷಣತಜ್ಞೆ ಕೋಮಲ್ ಜೆನಿಫರ್ ಡಿ’ಸೋಜಾ ಭಾಗವಹಿಸಲಿದ್ದಾರೆ. ಶನಿವಾರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾನಸಿಕ ತರಬೇತುಗಾರ್ತಿ ಮತ್ತು ಚಿಕಿತ್ಸಕಿ ತನುಜಾ ಮಾಬೆನ್, […]

ಮಾಹೆ: ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಪ್ರದರ್ಶನ

ಮಣಿಪಾಲ: ಬರಹಗಾರ ಮತ್ತು ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಪ್ರದರ್ಶನಗೊಂಡಿತು. ಮಾಹೆ ಪರಿಸರದಲ್ಲಿ ಬೆಳೆದ, ಸದ್ಯ ದೆಹಲಿಯಲ್ಲಿ ವಾಸಿಸುತ್ತಿರುವ ಶೆಣೈ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಬದುಕನ್ನು ಅವಲೋಕಿಸುವುದು ಮತ್ತು ವೈವಿಧ್ಯಮಯ ಚಲನಚಿತ್ರಗಳನ್ನು ನೋಡುವುದು ಉತ್ತಮ ಚಲನಚಿತ್ರವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ‘ಮಧ್ಯಂತರ’ದಲ್ಲಿನ ಹೆಚ್ಚಿನ ವಿವರಗಳು ಸಿನಿಮಾದೊಂದಿಗಿನ ಅವರ ಎರಡು ದಶಕಗಳಿಗೂ ಹೆಚ್ಚಿನ ಒಡನಾಟದ ಸಮಯದಲ್ಲಿನ ಅವಲೋಕನ ಮತ್ತು ಅನುಭವದಿಂದ ಜನಿಸಿದವುಗಳಾಗಿವೆ ಎಂದರು. ತಮ್ಮ […]