ಅಕ್ಟೋಬರ್ 19 ರಂದು ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ […]

ಪಾದಚಾರಿಗಳಿಗೆ ಕಾರು ಡಿಕ್ಕಿ: ಹಲವರಿಗೆ ಗಾಯ; ಓರ್ವ ಮೃತ್ಯುವಶ

ಮಣಿಪಾಲ: ಇಲ್ಲಿನ ಸೆಂಟ್ರಲ್ ಪಾರ್ಕ್ ಹೋಟೇಲ್ ಇಳಿಜಾರು ರಸ್ತೆಯಲ್ಲಿ ತಡರಾತ್ರಿ ಅತಿ ವೇಗದಿಂದ ಬಂದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಹಲವರು ಗಾಯಗೊಂಡಿದ್ದು, ಓರ್ವ ಯುವಕ ಮೃತನಾಗಿದ್ದಾನೆ. ಇಲ್ಲಿನ ಐನಾಕ್ಸ್ ಚಿತ್ರಮಂದಿರದ ಹತ್ತಿರ ಹೋಟೇಲ್ ಒಂದರಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಪಶ್ಚಿಮ ಬಂಗಾಲದ ನಿವಾಸಿ ಸಾಹಿನ್ ಎಸ್.ಕೆ(18) ಮೃತಪಟ್ಟ ಯುವಕ. ಇನ್ನುಳಿದ ಇತರ ಪಾದಾಚಾರಿಗಳಾದ ಸುಮಿತ್ ಜಸ್ವಾಲ್, ಸಂಸುಲ್ ಆರೀಫ್ ಹೋಕ್ಯೂ, ಲತೀಫುಲ್ ಚೌಧರಿ, ಸುಕ್ದೇಬ್ ಕರ್ಮರ್ಕರ್ ಇವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಎಲ್ಲರಿಗೂ […]

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಯಿತು.

ಮಣಿಪಾಲ: ಅಕ್ಟೋಬರ್ ಎರಡನೇ ಶನಿವಾರದಂದು ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಗುತ್ತದೆ. ವಾಯ್ಸ್ ಫಾರ್ ವಿಶ್ರಾಂತಿ ದಿನವನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಅದೇ ದಿನ ಆಚರಿಸಲಾಗುತ್ತದೆ. ವಿಶ್ವ ಹಾಸ್ಪೈಸ್ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸುವುದರ ಮುಖ್ಯ ಉದ್ದೇಶ ಪ್ರಶಾಮಕ ಆರೈಕೆ ಅಗತ್ಯಗಳನ್ನು ಪರಿಹರಿಸುವುದು ಮತ್ತು ಅವಶ್ಯವಿರುವ ರೋಗಿಗಳಿಗೆ ಪ್ರಶಾಮಕ ಆರೈಕೆಯ ಅರಿವು ಹೆಚ್ಚಿಸುವ ದೃಷ್ಟಿಯನ್ನು ಹಂಚಿಕೊಳ್ಳುವುದು. ಈ ಅಭಿಯಾನವು ಜೀವನ-ಸೀಮಿತ ಕಾಯಿಲೆಯಿಂದ ಬಳಲುತ್ತಿರುವ ಜನರು ಮತ್ತು ಅವರ ಕುಟುಂಬಗಳ ವೈದ್ಯಕೀಯ, ಸಾಮಾಜಿಕ, ಪ್ರಾಯೋಗಿಕ […]

ವಿನೋಬಾ ಭಾವೆ ಅವರ ಭೂದಾನ ಚಳುವಳಿ ಗಾಂಧಿತತ್ವದ ಶ್ರೇಷ್ಠ ಉದಾಹರಣೆ: ವಿಶಂಬರನಾಥ್ ಅಗರ್ವಾಲ್

ಮಣಿಪಾಲ: ಭೂದಾನ ಆಂದೋಲನವು ಆಚಾರ್ಯ ವಿನೋಬಾ ಭಾವೆಯವರ ಒಂದು ಅನನ್ಯ ಕೊಡುಗೆಯಾಗಿದೆ ಮತ್ತು ಇದರ ತತ್ವ ಮತ್ತು ಕಾರ್ಯ ನಿಜವಾದ ಅರ್ಥದಲ್ಲಿ ಗಾಂಧಿವಾದದ ಮೇಲೆ ನಿಂತಿದೆ ಎಂದು ವಿದ್ವಾಂಸ ವಿಶಂಬರನಾಥ್ ಅಗರ್ವಾಲ್ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ನಡೆದ ‘ವಿನೋಬಾ ಭಾವೆ: ಜೀವನ ಮತ್ತು ತತ್ವ’ ಕುರಿತ ಉಪನ್ಯಾಸದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಯಂಪ್ರೇರಿತವಾಗಿ ಭೂಮಿ ಅಥವಾ ಹಣವನ್ನು ದಾನ ಮಾಡುವುದು ಹೆಚ್ಚು ಮಾನವೀಯ ಸಮಾಜವನ್ನು ರೂಪಿಸುವತ್ತ ನಿಜವಾದ ಗಾಂಧಿತತ್ವದ […]

ಅಕ್ಟೋಬರ್ 11 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಅಕ್ಟೋಬರ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮುಂಡ್ಲಿ ಫೀಡರ್‌ನಲ್ಲಿ ಲೈನಿನ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಮುಂಡ್ಲಿ, ದುರ್ಗ, ತೆಳ್ಳಾರ್, ಪೊಲ್ಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಉಡುಪಿ ನಿಟ್ಟೂರಿನಲ್ಲಿರುವ 1*10 ಎಂ.ವಿ.ಎ, 110/11ಕೆವಿ ಪರಿವರ್ತಕವನ್ನು 1*20 ಎಂ.ವಿ.ಎ ಗೆ ಉನ್ನತೀಕರಿಸುವ […]