ದಶಮಾನೋತ್ಸವ ಸಂಭ್ರಮದಲ್ಲಿ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್

ಮಣಿಪಾಲ: ಉದ್ಯೋಗ ಆಥವಾ ನೌಕರಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ / ಮಾಂಟೆಸ್ಸರಿ ಕೋರ್ಸ್ ಅನ್ನು ಮಣಿಪಾಲದ, ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನಡೆಸಲಾಗುತ್ತಿದೆ. ದಶಮಾನೋತ್ಸವ ಆಚರಿಸುತ್ತಿರುವ ಈ ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದಲೂ ತರಬೇತಿ ನೀಡುತ್ತಿದ್ದು, 500ಕ್ಕೂ ಮಿಕ್ಕಿ ಯುವತಿಯರಿಗೆ ಉದ್ಯೋಗವನ್ನು ದೊರಕಿಸಿಕೊಡುವಲ್ಲಿ ಯಶ್ವಸಿಯಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ […]
ಮಾಹೆಯ ನೂತನ ರಿಜಿಸ್ಟ್ರಾರ್ ಆಗಿ ಡಾ. ಪಿ. ಗಿರಿಧರ್ ಕಿಣಿ ಅಧಿಕಾರ ಸ್ವೀಕಾರ

ಮಣಿಪಾಲ: ಮಾಹೆಯ ಅಡ್ಮಿಶನ್ ವಿಭಾಗದ ನಿರ್ದೇಶಕ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಡಾ. ಪಿ. ಗಿರಿಧರ್ ಕಿಣಿ ಇವರು ಮಾಹೆ ಮಣಿಪಾಲದ ನೂತನ ರಿಜಿಸ್ಟ್ರಾರ್(ಕುಲಸಚಿವ) ಆಗಿ ನೇಮಕಗೊಂಡಿದ್ದು ಡಿ. 01 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿ.ಇ. ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ (1995 ) ಮತ್ತು ಎಂ.ಟೆಕ್(1998) ಮತ್ತು ಪಿಎಚ್ ಡಿ ಪದವೀಧರರಾದ ಇವರು 1999 ರಲ್ಲಿ ತಾವು ಓದಿದ ಕಾಲೇಜಿನಲ್ಲಿಯೆ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿ ಅಂದಿನಿಂದ ಮಾಹೆಯಲ್ಲಿ […]
ಮಾಹೆ ಜಿಸಿಪಿಎಎಸ್ ನಲ್ಲಿ ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕ ಬಿಡುಗಡೆ

ಮಣಿಪಾಲ: ಜಗತ್ತಿನ ಉಪಭೋಗವಾದದ ಮನೋಭಾವ ಪರಿಸರದ ಜೀವಾಳವನ್ನೇ ಭಕ್ಷಿಸುತ್ತಿರುವ ಮತ್ತು ಹಿಂಸಾಚಾರವು ವಿಪರೀತವಾಗುತ್ತಿರುವ ಈ ಕಾಲಕ್ಕೆ ಮಹಾತ್ಮ ಗಾಂಧಿಯವರು ಹೆಚ್ಚು ಪ್ರಸ್ತುತವಾಗುತ್ತಾರೆ ಎಂದು ಪರಿಸರವಾದಿ ಮಮತಾ ರೈ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಬಹುರೂಪಿ ಮತ್ತು ವಿವಿಡ್ ಲಿಪಿ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಲಾವಿದ ಗುಜ್ಜಾರ್ ಅವರ ಮಕ್ಕಳಿಗಾಗಿ ಗಾಂಧಿ ಮತ್ತು ಗಾಂಧಿ ಇಲ್ಲಸ್ಟ್ರೇಟೆಡ್ ಫಾರ್ ಕಿಡ್ಸ್ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಇಂದು ಬಿಡುಗಡೆಯಾಗಿರುವ ಸಚಿತ್ರ ಪುಸ್ತಕಗಳು […]
ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನ

ಉಡುಪಿ: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ […]
ವಿಶ್ವದ ಅತಿದೊಡ್ಡ ಮೂತ್ರಕೋಶದ ಕಲ್ಲಿನ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಕೆ.ಎಂ.ಸಿ ವೈದ್ಯರ ತಂಡ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ತೆಗೆದಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರದ ಸಮಸ್ಯೆಗಾಗಿ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಈ ಪ್ರತಿ ಭೇಟಿಯಲ್ಲಿಯೂ ಅವರಿಗೆ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಮಹಿಳೆಯು ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸಿಟಿ ಸ್ಕ್ಯಾನ್ ಮಾಡಿದಾಗ ಸಂಪೂರ್ಣ ಮೂತ್ರಕೋಶವನ್ನು ಆಕ್ರಮಿಸಿಕೊಂಡಿರುವ ಕಲ್ಲು ಇರುವುದು ಬಹಿರಂಗವಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ […]