ನ.7 ರಂದು ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮ

ಮಣಿಪಾಲ: ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮವು ನ.6 ರವಿವಾರ ಮತ್ತು ನ.7ಸೋಮವಾರದಂದು ನಡೆಯಲಿರುವುದು. ನ.6 ರಂದು ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ದೀಪಪ್ರಜ್ವಲನೆ, ಭಜನಾ ಪ್ರಾರಂಭ ಮತ್ತು ದೀಪ ಸ್ಥಾಪನೆ ನಡೆಯಲಿದ್ದು, ನ.7 ರಂದು ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ಮತ್ತು ಭಜನಾ ಏಕಾಹದಲ್ಲಿ ಭಾಗವಹಿಸಿದ ಭಜನಾ ಮಂಡಳಿಗಳಿಗೆ ಗೌರವಾರ್ಪಣೆ ನಡೆಯಲಿರುವುದು.   ಸಭಾ ಕಾರ್ಯಕ್ರಮದ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]

ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು […]

ಮಲ್ಪೆ: ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮರಳು ಶಿಲ್ಪ ಕಲೆ ಅನಾವರಣ

ಮಲ್ಪೆ: ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಪಾರ್ಶ್ವವಾಯುವಿನಿಂದಾಗುವ ಗಂಭೀರ ಸ್ವರೂಪ, ಪಾರ್ಶ್ವವಾಯುವಿನ ಬಗ್ಗೆ ಜಾಗೃತಿ ಮೂಡಿಸಲು, ಪಾರ್ಶ್ವವಾಯುವಿನ ಅಪಾಯದ ಅಂಶಗಳು ಮತ್ತು ಚಿಹ್ನೆಗಳ ಬಗ್ಗೆ ಉತ್ತಮ ಸಾರ್ವಜನಿಕ ಅರಿವಿನ ಮೂಲಕ ಪಾರ್ಶ್ವವಾಯುವಿನ ಹೊರೆಯನ್ನು ಕಡಿಮೆ ಮಾಡುವ ವಿಧಾನಗಳ ಕುರಿತು ಮಾತನಾಡಲು ಉತ್ತಮ ಅವಕಾಶವನ್ನು ಈ ದಿನವು ಕಲ್ಪಿಸಿದೆ. ಈ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು […]

ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ಮುಗಿಲು ಮುಟ್ಟಿದ ಕೋಟಿ ಕಂಠ ಗಾಯನ

ಮಣಿಪಾಲ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ‌ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರದಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂಬಾಗದಲ್ಲಿರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ನಡೆಯಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕನ್ನಡ ಶಾಲು ಮತ್ತು ಟೋಪಿಗಳನ್ನು ಧರಿಸಿ ರಾಜ್ಯ […]

ಕಲಾವಿದ ಸತೀಶ್ಚಂದ್ರ ಅವರ ಕುಂಚದಿಂದ ಮೂಡಿಬಂತು ಕಾಂತಾರದ ಪಂಜುರ್ಲಿ ದೈವ!

ಮಣಿಪಾಲ: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ ಮಾಡಿದ ಭೂತಾರಾಧನೆ ಕುರಿತ ಕಾಂತಾರ ಚಿತ್ರದ ಪಂಜುರ್ಲಿ ದೈವದ ಅಕ್ರಿಲಿಕ್ ಚಿತ್ರವನ್ನು ಮಣಿಪಾಲದ ಕಲಾವಿದ ಸತೀಶ್ಚಂದ್ರ ಅವರು ಅದ್ಭುತವಾಗಿ ಕುಂಚದಲ್ಲಿ ಸೆರೆಹಿಡಿದಿದ್ದು, ಇದು ಎಲ್ಲೆಡೆ ವೈರಲ್ ಆಗಿದೆ. ದೈವದ ಕಾಲಿನ ಗಗ್ಗರ ಇವರ ಕೈ ಚಳಕದ ಸ್ವಂತ ರಚನೆಯಾಗಿದೆ. ಸತೀಶ್ಚಂದ್ರ ಲಯನ್ಸ್ ಸಂಸ್ಥೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾಗಿದ್ದರು. ತರಂಗ ವಾರಪತ್ರಿಕೆಯಲ್ಲಿ ಇವರ ಚಿತ್ರಗಳು ಪ್ರಕಟವಾಗುತ್ತಿರುತ್ತವೆ.